ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ನಡೆಯಿತು ಬಂಟ್ವಾಳ ಮಹಿಳೆಯ ಅಂತ್ಯಸಂಸ್ಕಾರ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟ ಕೊರೊನಾ ಸೋಂಕಿತ ಬಂಟ್ವಾಳ ಪೇಟೆಯ 67 ವರ್ಷದ ಮಹಿಳೇ ಅಂತ್ಯಸಂಸ್ಕಾರವನ್ನು ಮಂಗಳೂರು ಬೋಳೂರು ಹಿಂದು ರುದ್ರಭೂಮಿಯ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಯಿತು.

ಜಾಹೀರಾತು

ಮೃತದೇಹವನ್ನು ಸಂಬಂಧಿಕರಿಗೆ ದೂರದಿಂದಲೇ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಕೊರೊನಾ ಸೋಂಕಿನಿಂದ ಈ ಹಿಂದೆ ಬಂಟ್ವಾಳದ ಒಂದೇ ಮನೆಯ ಇಬ್ಬರು ಮಹಿಳೆಯರು ಮೃತಪಟ್ಟ ಸಂದರ್ಭದ ಅಂತ್ಯಸಂಸ್ಕಾರದ ವಿಚಾರದಲ್ಲಿ ಗೊಂದಲ ಏರ್ಪಟ್ಟಿತ್ತು. ಮೊದಲ ಸಾವು ಸಂಭವಿಸಿದ ಸಂದರ್ಭ ಬೋಳೂರು ಸ್ಮಶಾನದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಎರಡನೇ ಸಾವು ಸಂಭವಿಸಿದಾಗ ಅಂತ್ಯ ಸಂಸ್ಕಾರಕ್ಕೆ ಮಂಗಳೂರಿನ ಬೋಳೂರು, ಪಚ್ಚನಾಡಿಯಲ್ಲಿ ಆಕ್ಷೇಪಗಳು ಬಂದದ್ದಷ್ಟೇ ಅಲ್ಲ, ಹಲವೆಡೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದ ಬಳಿಕ ಮಧ್ಯರಾತ್ರಿ ಬಿ.ಸಿ.ರೋಡಿನ ಕೈಕುಂಜೆಯ ಹಿಂದು ರುದ್ರಭೂಮಿಯಲ್ಲಿಉ ನಡೆಸಲಾಗಿತ್ತು. ಇದು ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಅದಾದ ಬಳಿಕವಷ್ಟೇ ಕೊರೊನಾ ಸಾವಿನ ಮೃತದೇಹದ ಅಂತ್ಯಸಂಸ್ಕಾರವನ್ನು ಬೋಳೂರು ಸ್ಮಶಾನದಲ್ಲಿ ನಡೆಸುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ