ಬಿ.ಸಿ.ರೋಡ್ ಬಸ್ ನಿಲ್ದಾಣದಿಂದ ಊರಿಗೆ ಹೊರಟಿದ್ದಾರೆ ವಲಸೆ ಕಾರ್ಮಿಕರು

ಬಂಟ್ವಾಳ ತಾಲೂಕಿನಿಂದ ಎರಡನೇ ಹಂತದಲ್ಲಿ ತಾಲೂಕಿನಾದ್ಯಂತ ಇರುವ ವಲಸೆ ಕಾರ್ಮಿಕರು ತಮ್ಮೂರುಗಳಿಗೆ ಮರಳುವ ಕಾರ್ಯ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸೋಮವಾರ ಸಂಜೆ ಬಳಿಕ ನಡೆಯಿತು.

ಜಾಹೀರಾತು

ಜಾಹೀರಾತು

 

ಜಾಹೀರಾತು

ಕೋಲಾರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಬೀದರ್, ಯಾದಗಿರಿ, ರಾಯಚೂರು, ಹಾಸನ, ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ಕೊಪ್ಪಳ, ಹಾವೇರಿ, ವಿಜಯಪುರ, ಅಂಕೋಲ, ಬಾಗಲಕೋಟೆ, ಗದಗ, ಕಾರವಾರ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ ಹೀಗೆ 27 ಜಿಲ್ಲೆಗಳಿಗೆ ತೆರಳುವ ಸುಮಾರು 353ರಷ್ಟು ಕಾರ್ಮಿಕರನ್ನು ಪಿಡಿಒಗಳ ಮೂಲಕ ಬಸ್ ನಿಲ್ದಾಣಕ್ಕೆ ಕರೆತರಲಾಯಿತು. ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಆಹಾರ, ನೀರಿನ ಬಾಟಲಿಗಳನ್ನು ಒದಗಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಸ್ಸಿಗೆ ಹತ್ತಿಸಲಾಯಿತು. ಬಳಿಕ ನಿಯಮಾವಳಿಗಳ ಪ್ರಕಾರವೇ ಅವರನ್ನು ಕುಳ್ಳಿರಿಸಿ ಆಯಾ ಊರುಗಳಿಗೆ ಕರೆದೊಯ್ಯುವ ಕಾರ್ಯ ನಡೆಯುತ್ತಿದೆ. ಒಟ್ಟು 15 ಬಸ್ಸುಗಳಲ್ಲಿ ಕಾರ್ಮಿಕರು ತೆರಳುತ್ತಿದ್ದಾರೆ.

ಜಾಹೀರಾತು

ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್ ಅವರು ಸ್ಥಳದಲ್ಲಿ ಹಾಜರಿದ್ದು, ಕಾರ್ಮಿಕರನ್ನು ಕರೆದುಕೊಂಡು ಹೋಗುವ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಅಗತ್ಯವಿರುವ ಆಹಾರ, ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಿದರು. ಪಲಾವ್ ಮತ್ತು ನೀರಿನ ಬಾಟಲಿಗಳನ್ನು ಸ್ಥಳದಲ್ಲೇ ಒದಗಿಸಿದರೆ, ಚೌಚೌ ಬಾತ್, ಶೀರಾ, ಸಜ್ಜಿಗೆಯನ್ನು ಚಾಲಕರಿಗೆ ಪಾರ್ಸೆಲ್ ನೀಡಲಾಯಿತು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಕಾರ್ಮಿಕ ನಿರೀಕ್ಷಕರಾದ ಮೆರ್ಲಿನ್ ಗ್ರೇಸಿ ಡಿಸೋಜ, ವಿಟ್ಲ ಪಪಂ ಮುಖ್ಯಾಧಿಕಾರಿ ಮಾಲಿನಿ, ಬಂಟ್ವಾಳ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಬಂಟ್ವಾಳ ನಗರ, ಗ್ರಾಮಾಂತರ ಠಾಣೆ ಎಸ್ಸೈಗಳಾದ ಅವಿನಾಶ್, ಪ್ರಸನ್ನ, ಟ್ರಾಫಿಕ್ ನ ಗಣೇಶ್ ಪೈ, ಆರೋಗ್ಯ ಇಲಾಖೆಯ ಡಾ. ಸತೀಶ್ ಮತ್ತು ಡಾ. ಕಾಮತ್ , ಪ್ರವೀಣ್, ಯಶೋಧಾ, ಕೆ.ಎಸ್.ಆರ್.ಟಿ.ಸಿ, ಕಂದಾಯ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ, ಆರೋಗ್ಯ ಸಹಿತ ಹಲವು ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಶಾಸಕರ ಕಚೇರಿ ಸಹಾಯವಾಣಿ ತಂಡದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದು ಪೂರಕ ವ್ಯವಸ್ಥೆ ಕಲ್ಪಿಸಲು ನೆರವಾದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್ ಬಸ್ ನಿಲ್ದಾಣದಿಂದ ಊರಿಗೆ ಹೊರಟಿದ್ದಾರೆ ವಲಸೆ ಕಾರ್ಮಿಕರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*