ಬಂಟ್ವಾಳ

ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ 65 ಬಡ ಕುಟುಂಬಗಳಿಗೆ ಶಾಸಕ ರಾಜೇಶ್ ನಾಯ್ಕ್ ಅವರಿಂದ ಆಹಾರ ಸಾಮಗ್ರಿ ವಿತರಣೆ

ಬಂಟ್ವಾಳ : ಸೂರಿಕುಮೇರುನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ 65 ಬಡಕುಟುಂಬಗಳಿಗೆ ಶಾಸಕ ರಾಜೇಶ್ ನಾಯ್ಕ್ ಅವರ ವೈಯಕ್ತಿಕ ನಿಧಿಯಿಂದ ದಿನಬಳಕೆಯ ಅಗತ್ಯ ಆಹಾರ ಸಾಮಾಗ್ರಿಗಳನ್ನು ಬುಧವಾರ ವಿತರಿಸಲಾಯಿತು.

ಜಾಹೀರಾತು

ಸೂರಿಕುಮೇರು ಬೊರಿಮಾರ್ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಣಿ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ , ನೇರಳಕಟ್ಟೆ ವ್ಯ.ಸೇ.ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಪ್ರಮುಖರಾದ ತೋಟ ನಾರಾಯಣ ಶೆಟ್ಟಿ, ನರಸಿಂಹ ಮಾಣಿ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಎಲಿಯಾಸ್ ಪಿರೇರಾ, ಕಾರ್ಯದರ್ಶಿ ಮೇರಿ ಡಿ’ಸೋಜಾ, ಧರ್ಮಭಗಿನಿ‌ ನ್ಯಾನ್ಸಿ ಕಿಟ್ ಗಳನ್ನು ವಿತರಿಸಿದರು.

ಪಾಲನಾ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದು, ಚರ್ಚ್ ಮೇಲೆ ಪ್ರೀತಿ ಇಟ್ಟು ಕಿಟ್ ಗಳನ್ನು ಕೊಡುಗೆಯಾಗಿ‌ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.