ಬಂಟ್ವಾಳ

ಮಹಾರಾಷ್ಟ್ರದ ಕನ್ನಡಿಗರಿಗೆ ಊರಿಗೆ ಬರಲು ಅವಕಾಶ ನೀಡುವಂತೆ ರಮಾನಾಥ ರೈ ಒತ್ತಾಯ

ಮುಂಬಯಿ ಸೇರಿದಂತೆ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಬಾಕಿಯಾಗಿರುವ ಕನ್ನಡಿಗರಿಗೆ ಊರಿಗೆ ಬರುವುದಕ್ಕೆ ಅವಕಾಶ ಮಾಡಿ, ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.


ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಕನ್ನಡಿಗರು ಉದ್ಯೋಗದೊಂದಿಗೆ ಬದುಕು ಕಟ್ಟಿಕೊಂಡಿದ್ದು, ಪ್ರಸ್ತುತ ಅವರು ಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಅವರ ಕಷ್ಟಕ್ಕೆ ನೆರವಾಗುವುದು ಸರಕಾರದ ಕರ್ತವ್ಯವಾಗಿದ್ದು, ಅವರು ಊರಿಗೆ ಬರಲು ಅನುಮತಿ ನೀಡಬೇಕು. ಊರಿಗೆ ಬರುವ ಬಸ್ಸಿನ ವ್ಯವಸ್ಥೆಗಳನ್ನು ಕೂಡ ಅವರೇ ಕೈಗೊಂಡಿದ್ದಾರೆ.
ಊರಿಗೆ ಬರುವ ವೇಳೆ ಆರೋಗ್ಯ ತಪಾಸಣೆ, ಇಲ್ಲಿ ಕ್ವಾರಂಟೈನ್ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಸರಕಾರ ಕೈಗೊಳ್ಳಲಿ. ಈಗಾಗಲೇ ಅವರು ಇಲ್ಲಿನ ಪ್ರಮುಖರಿಗೆ ಮನವಿ ಮಾಡಿದ್ದು, ತನಗೂ ಕರೆ ಮಾಡಿ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸರಕಾರ ಈ ಕುರಿತು ಗಮನಹರಿಸಬೇಕು ಎಂದು ತಾನು ಒತ್ತಾಯಿಸುತ್ತಿದ್ದೇನೆ ಎಂದರು. ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್‌ಕುಮಾರ್ ಶೆಟ್ಟಿ ಜತೆಗಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ