ಬಂಟ್ವಾಳ

ಸರ್ಕಾರದ ಸ್ಪಷ್ಟ ನೀತಿ ಇದ್ದರಷ್ಟೇ ಎಲ್ಲ ಕಾರ್ಮಿಕರಿಗೂ ನೆರವು ಸಾಧ್ಯ: ರಮಾನಾಥ ರೈ ಸಲಹೆ

ರಾಜ್ಯ ಸರಕಾರ ಕಾರ್ಮಿಕರ ಪರವಾಗಿ ಘೋಷಿಸಿದ ನೆರವು ಎಲ್ಲ ಕಾರ್ಮಿಕರನ್ನೂ ತಲುಪದಿದ್ದರೆ ಘೋಷಣೆಗಷ್ಟೇ ಸೀಮಿತವಾದೀತು. ನಿಬಂಧನೆಗಳನ್ನು ಸಡಿಲಿಸಿ, ಪ್ರತಿಯೊಬ್ಬ ಕಾರ್ಮಿಕರಿಗೂ ತಲುಪುವ ಕೆಲಸವಾಗಬೇಕು ಎಂಬುದು ನನ್ನ ಸಲಹೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

 

ಪತ್ರಿಕಾ ಹೇಳಿಕೆ ನೀಡಿರುವ ಅವರು,ಸರಕಾರದ ನೆರವಿನಲ್ಲಿ ಹಲವು ಷರತ್ತುಗಳು ಇರುವ ಕಾರಣ, ಹಲವಾರು ಕಾರ್ಮಿಕರು ನೆರವಿನಿಂದ ವಂಚಿತರಾಗುವ ಸಾಧ್ಯತೆ ಇದೆ. ಪ್ರತಿಯೊಬ್ಬ ಕಾರ್ಮಿಕರನ ಪರವಾಗಿಯೂ ಸರಕಾರ ನಿಲ್ಲಬೇಕು, ಇವರ ಕುರಿತು ಸ್ಪಷ್ಟ ನೀತಿ ಅನುಸರಿಸಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿಯೇ ಇರುವ ಕೋಟ್ಯಂತರ ರೂಪಾಯಿ ನಿಧಿಯನ್ನು ಅವರಿಗಾಗಿಯೇ ಬಳಸಲು ಇದು ಸಕಾಲ. ಸಂಘಟಿತರಾಗಿರುವ ಕಾರ್ಮಿಕರೂ ಇಂದು ಲಾಕ್ ಡೌನ್ ನಿಂದ ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿರುವ ವೇಳೆಯಲ್ಲಿ ಅವರ ಪಿಎಫ್, ಇಎಸ್ ಐಯನ್ನು ಬಳಸಲು ಅವಕಾಶ ಮಾಡಿಕೊಡಬೇಕು. ಇದಕ್ಕೆ ಕಾನೂನು ತೊಡಕಿದ್ದರೆ ಅವುಗಳನ್ನು ನಿವಾರಿಸಬೇಕು. ಇಂಥ ವಿಷಯಗಳಲ್ಲಿ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳುವುದು ಅವಶ್ಯಕ ಎಂದು ರೈ ಹೇಳಿದ್ದಾರೆ.

ಹೊರರಾಜ್ಯದಲ್ಲಿರುವ ಜನರಿಗೆ ನೆರವಾಗುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು. ಅವರನ್ನು ಅಲ್ಲಿಂದ ತಪಾಸಣೆಗೊಳಪಡಿಸಿ, ಬಸ್ಸಿನಲ್ಲೇ ಬಂದಿಳಿದ ಬಳಿಕ ಅವರ ತಪಾಸಣೆ ನಡೆಸಿ ಕ್ವಾರಂಟೈನ್ ನಲ್ಲಿಡುವ ಕಾರ್ಯವನ್ನೂ ಮಾಡಬಹುದು. ಅಧಿಕೃತವಾಗಿಯೇ ಅವರನ್ನು ನಿಯಮಾವಳಿ ಪಾಲಿಸಿ ಊರಿಗೆ ಕರೆತರುವ ವ್ಯವಸ್ಥೆಯನ್ನು ಕಲ್ಪಿಸಬಹುದು ಎಂದು ರೈ ಸಲಹೆ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

54 minutes ago