ಕ್ಷೌರಿಕರಿಗೆ ಸರಕಾರದ ಸಹಾಯಧನ ಸ್ವಾಗತಾರ್ಹ: ತಾಲೂಕು ಸವಿತಾ ಸಮಾಜ

ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸವಿತಾ ಸಮಾಜದ ಕ್ಷೌರಿಕರಿಗೆ 5 ಸಾವಿರ ರೂ. ಸಹಾಯಧನ ಘೋಷಿಸಿರುವುದನ್ನು ಬಂಟ್ವಾಳ ತಾಲೂಕು ಸವಿತಾ ಸಮಾಜ ಸ್ವಾಗತಿಸಿದೆ.

ಪ್ರಸ್ತುತ ಈ ಸಹಾಯಧನವನ್ನು ಯಾವ ರೀತಿ ನೀಡುತ್ತದೆ ಎಂಬುದರ ಕುರಿತು ಮಾಹಿತಿ ಇಲ್ಲ. ಆದರೆ ಸರಕಾರವು ಅಸಂಘಟಿತ ಕಾರ್ಮಿಕರಿಗೆ ಸಹಾಯಧನವನ್ನು ಕಾರ್ಮಿಕ ಇಲಾಖೆಯ ಮೂಲಕ ವಿತರಿಸುತ್ತಿದ್ದು, ಅದನ್ನು ಪಡೆಯುವುದಕ್ಕೆ ಸ್ಮಾರ್ಟ್ ಕಾರ್ಡ್ ಅಗತ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರದ ಸೌಲಭ್ಯಕ್ಕಾಗಿ ಸ್ಮಾರ್ಟ್ ಕಾರ್ಡ್ ಮಾಡುವುದಕ್ಕೆ ೬೦ ವರ್ಷದೊಳಗಿನ ಸವಿತಾ ಸಮಾಜದ ಕ್ಷೌರಿಕರು ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಮುಂಭಾಗದಲ್ಲಿರುವ ಸವಿತಾ ಸೌಹಾರ್ದ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ವೇಳೆ ಜನ್ಮ ದಿನಾಂಕ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ/ ಚಲನಾ ಪರವಾನಿಗೆ/ ಶಾಲಾ ದಾಖಲಾತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ ೨ ಭಾವಚಿತ್ರ ನೀಡಬೇಕಿದೆ. ಸಂಕಷ್ಟಕ್ಕೊಳಗಾದ ಸವಿತಾ ಸಮಾಜದ ಬಂಧುಗಳಿಗೆ ಈಗಾಗಲೇ ಸಂಘದ ವತಿಯಿಂದ ಕಿಟ್ ಗಳನ್ನು ವಿತರಿಸಲಾಗಿದೆ. ತಾಲೂಕಿನ ಸವಿತಾ ಸಮಾಜದ ಕ್ಷೌರಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗಾಗಿ ಸಂಘವು ಬಂಟ್ವಾಳ ಶಾಸಕರ ಬಳಿ ಮನವಿ ಮಾಡಿದೆ ಎಂದು ತಾಲೂಕು ಸಂಘದ ಅಧ್ಯಕ್ಷ ಸುರೇಶ್ ನಂದೊಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕ್ಷೌರಿಕರಿಗೆ ಸರಕಾರದ ಸಹಾಯಧನ ಸ್ವಾಗತಾರ್ಹ: ತಾಲೂಕು ಸವಿತಾ ಸಮಾಜ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*