ಬಂಟ್ವಾಳ

ಕ್ಷೌರಿಕರಿಗೆ ಸರಕಾರದ ಸಹಾಯಧನ ಸ್ವಾಗತಾರ್ಹ: ತಾಲೂಕು ಸವಿತಾ ಸಮಾಜ

ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸವಿತಾ ಸಮಾಜದ ಕ್ಷೌರಿಕರಿಗೆ 5 ಸಾವಿರ ರೂ. ಸಹಾಯಧನ ಘೋಷಿಸಿರುವುದನ್ನು ಬಂಟ್ವಾಳ ತಾಲೂಕು ಸವಿತಾ ಸಮಾಜ ಸ್ವಾಗತಿಸಿದೆ.

ಪ್ರಸ್ತುತ ಈ ಸಹಾಯಧನವನ್ನು ಯಾವ ರೀತಿ ನೀಡುತ್ತದೆ ಎಂಬುದರ ಕುರಿತು ಮಾಹಿತಿ ಇಲ್ಲ. ಆದರೆ ಸರಕಾರವು ಅಸಂಘಟಿತ ಕಾರ್ಮಿಕರಿಗೆ ಸಹಾಯಧನವನ್ನು ಕಾರ್ಮಿಕ ಇಲಾಖೆಯ ಮೂಲಕ ವಿತರಿಸುತ್ತಿದ್ದು, ಅದನ್ನು ಪಡೆಯುವುದಕ್ಕೆ ಸ್ಮಾರ್ಟ್ ಕಾರ್ಡ್ ಅಗತ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರದ ಸೌಲಭ್ಯಕ್ಕಾಗಿ ಸ್ಮಾರ್ಟ್ ಕಾರ್ಡ್ ಮಾಡುವುದಕ್ಕೆ ೬೦ ವರ್ಷದೊಳಗಿನ ಸವಿತಾ ಸಮಾಜದ ಕ್ಷೌರಿಕರು ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಮುಂಭಾಗದಲ್ಲಿರುವ ಸವಿತಾ ಸೌಹಾರ್ದ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ವೇಳೆ ಜನ್ಮ ದಿನಾಂಕ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ/ ಚಲನಾ ಪರವಾನಿಗೆ/ ಶಾಲಾ ದಾಖಲಾತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ ೨ ಭಾವಚಿತ್ರ ನೀಡಬೇಕಿದೆ. ಸಂಕಷ್ಟಕ್ಕೊಳಗಾದ ಸವಿತಾ ಸಮಾಜದ ಬಂಧುಗಳಿಗೆ ಈಗಾಗಲೇ ಸಂಘದ ವತಿಯಿಂದ ಕಿಟ್ ಗಳನ್ನು ವಿತರಿಸಲಾಗಿದೆ. ತಾಲೂಕಿನ ಸವಿತಾ ಸಮಾಜದ ಕ್ಷೌರಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗಾಗಿ ಸಂಘವು ಬಂಟ್ವಾಳ ಶಾಸಕರ ಬಳಿ ಮನವಿ ಮಾಡಿದೆ ಎಂದು ತಾಲೂಕು ಸಂಘದ ಅಧ್ಯಕ್ಷ ಸುರೇಶ್ ನಂದೊಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts