ಜಿಲ್ಲಾ ಸುದ್ದಿ

ದ.ಕ.ಜಿಲ್ಲೆಯಲ್ಲಿ ಸೋಂಕು ಮೂಲ ಪತ್ತೆ ಅನಿವಾರ್ಯ: ಮತ್ತಷ್ಟು ವಿವರಣೆ ಬಯಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ದ.ಕ. ಜಿಲ್ಲೆಯಲ್ಲಿ ಕಂಡು ಬಂದ ಕೋರೋನಾ ಪ್ರಕರಣಗಳ ಮೂಲ ಪತ್ತೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಜ್ಞ ವೈದ್ಯಕೀಯ ತಂಡದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜನರಲ್ಲಿ ಸಂಶಯ ನಿವಾರಣೆ ಆಗತ್ಯ ಇರುವುದರಿಂದ, ಸೋಂಕು ಮೂಲ ಪತ್ತೆ ಅನಿವಾರ್ಯವಾಗಿದ್ದು, ಇದರ ಬಗ್ಗೆ ಮತ್ತಷ್ಟು ವಿವರಣೆ ಪಡೆಯಬೇಕೆಂದು ತಿಳಿಸಿದರು.

ಜಾಹೀರಾತು

ಜಿಲ್ಲಾ ಆರೋಗ್ಯಾಧಿಕಾರಿ ಮಾತನಾಡಿ, ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1000ಕ್ಕೂ ಅಧಿಕ ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 17 ಖಚಿತ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 8 ಬಂಟ್ವಾಳ, 3 ಫಸ್ಟ್ ನ್ಯೂರೋ ಹಾಗೂ 6 ಬೋಳೂರು ಪ್ರದೇಶಕ್ಕೆ ಸಂಬಂಧಿಸಿದೆ ಎಂದರು.

ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಪಾಸಿಟಿವ್ ಬಂದಮೇಲೆ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇರಳ ರಾಜ್ಯದಿಂದಲೂ ಹಲವಾರು ಮಂದಿ ಒಳರೋಗಿ, ಹೊರರೋಗಿಯಾಗಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿ ತೆರಳಿದ್ದಾರೆ. ಇವರ ಗಂಟಲ ದ್ರವ ತಪಾಸಣೆ ಅಗತ್ಯವಾಗಿದ್ದು, ಕೇರಳ ಸರಕಾರದ ಜತೆ ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದರು.

ಅದೇ ರೀತಿ ಚಿಕ್ಕಮಂಗಳೂರು ಹಾಗೂ ಮಡಿಕೇರಿ ಜಿಲ್ಲೆಗಳಿಂದಲೂ ಈ ಆಸ್ಪತ್ರೆ ಗೆ ಹಲವಾರು ರೋಗಿಗಳು ದಾಖಲಾಗಿದ್ದು, ಮಡಿಕೇರಿ ಜಿಲ್ಲೆಯ ರೋಗಿಗಳ ವರದಿ ನೆಗೆಟಿವ್ ಆಗಿರುತ್ತದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 4398 ಗಂಟಲ ಮಾದರಿಯನ್ನು ಪರೀಕ್ಷೆ ಪಡಿಸಲಾಗಿದ್ದು ಈ ಪೈಕಿ 31 ಖಚಿತ ಪ್ರಕರಣಗಳಿವೆ. ಉಳಿದಿರುತ್ತದೆ. ಸೋಂಕು ಮೂಲ ಪತ್ತೆ ಸಂಬಂಧ ವರದಿ ಸಲ್ಲಿಸಲು ಕೇರಳದಿಂದ ಈ ಆಸ್ಪತ್ರೆಗೆ ಬಂದ ರೋಗಿಗಳ ತಪಾಸಣಾ ವರದಿ ಬಂದ ಬಳಿಕವಷ್ಟೇ ಸೂಕ್ತ ನಿರ್ಣಯಕ್ಕೆ ಬರಲು ಸಾಧ್ಯ. ಈ ಹಿನ್ನಲೆಯಲ್ಲಿ ವರದಿ ಮಂಡಿಸಲು ಕಾಲಾವಕಾಶದ ಅಗತ್ಯವಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಸಿಇಓ ಡಾ. ಸೆಲ್ವಮಣಿ, ತಜ್ಞ ವೈದ್ಯಕೀಯ ತಂಡದ ಸದಸ್ಯರಾದ ಡಾ. ಜಾನ್, ಡಾ. ಸುಚಿತ್ರಾ ಶೆಣೈ, ಡಾ. ಪ್ರಶಾಂತ್ ಮಾರ್ಲ, ಡಾ. ಸಂದೀಪ್ ರೈ, ಡಾ. ಅಣ್ಣಯ್ಯ ಕುಲಾಲ್ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago