ಬಂಟ್ವಾಳ

ಗೋವನ್ನು ಕೊಂದು ತ್ಯಾಜ್ಯವನ್ನು ನೇತ್ರಾವತಿ ನೀರಿಗೆಸೆದ ಘಟನೆ: ಸೂಕ್ತ ಕ್ರಮಕ್ಕೆ ವಿಹಿಂಪ ಒತ್ತಾಯ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಮತ್ತು ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮವನ್ನು ಸಂಪರ್ಕಿಸುವ ನೇತ್ರಾವತಿ ನದಿ ಕಿನಾರೆಯ ಕೂಟೇಲು ಎಂಬಲ್ಲಿ ಹತ್ಯೆಗೈದ ಗೋವಿನ ತ್ಯಾಜ್ಯವನ್ನು ಸೇತುವೆಯಿಂದ ನೀರಿಗೆ ಎಸೆದು ಪರಾರಿಯಾದ ಘಟನೆ ನಡೆದಿದೆ.

ಜಾಹೀರಾತು

ಸಾಂದರ್ಭಿಕ ಚಿತ್ರ

ಸೋಮವಾರ ಸಂಜೆ ಸೇತುವೆಯಿಂದ ಹಾದುಹೋಗುವ ಸಂದರ್ಭ ವಾಸನೆ ಬಡಿದು ಶೋಧಿಸಿದ ಸ್ಥಳೀಯರಿಗೆ ದನದ ಕಡಿದ ಕಾಲು ಮತ್ತು ತ್ಯಾಜ್ಯಗಳು ಇರುವುದು ಕಂಡುಬಂತು. ಕೂಡಲೇ ಬಜರಂಗದಳದ ಮಣಿನಾಲ್ಕೂರು ಜೈಹನುಮಾನ್ ಶಾಖೆ ಪ್ರಮುಖರು ಒಟ್ಟು ಸೇರಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರನ್ನೂ ನೀಡಲಾಗಿದೆ. ಈ ಸಂದರ್ಭ ವಿಶ್ವ ಹಿಂದು ಪರಿಷತ್ ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, ಉಭಯ ತಾಲೂಕಿನ ಗಡಿಪ್ರದೇಶವಾಗಿರುವ ಈ ಜಾಗ ಗೋಹಂತಕರಿಗೆ ಹೇಳಿ ಮಾಡಿಸಿದ ಹಾಗಿದ್ದು, ಈ ಸೇತುವೆಯಲ್ಲಿ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು ಅಳವಡಿಸಬೇಕು, ಗೋಹತ್ಯೆ ಮಾಡಿ ಮಾಂಸ ಮಾಡುವ ದಂಧೆ ನಡೆಸಿದ ಪಾತಕಿಗಳನ್ನು ಕೂಡಲೇ ಬಂಧಿಸಬೇಕು ಎಂದು ಎಚ್ಚರಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ