ಬಂಟ್ವಾಳ

ಜಾನುವಾರುಗಳನ್ನು ಕೊಂದು ಮಾಂಸ ಮಾರಾಟ ಪ್ರಕರಣ, ಇಬ್ಬರ ಬಂಧನ, ಕರುಗಳ ರಕ್ಷಣೆ

  • ವಿವರಗಳಿಗೆ ಕ್ಲಿಕ್ ಮಾಡಿರಿ

ಕಡೇಶ್ವಾಲ್ಯ ಗ್ರಾಮದ ನಚ್ಚಿಬೆಟ್ಟು ಎಂಬಲ್ಲಿರುವ ಮನೆಯೊಂದರಲ್ಲಿ ಹಸುಗಳ ಸಹಿತ ಜಾನುವಾರುಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು

ನಚ್ಚಿಬೆಟ್ಟು ಎಂಬಲ್ಲಿ ಪ್ರಕರಣ ನಡೆದಿದೆ. ಅಲ್ಲಿನ ನಿವಾಸಿ ಅಬ್ದುಲ್ ರಝಾಕ್ ಹಾಗೂ ಅಬೂಬಕ್ಕರ್ ಬಂಧಿತ ಆರೋಪಿಗಳು. ಇವರಿಬ್ಬರು ಗೋಮಾಂಸ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿ ದಾಳಿ ನಡೆಸಿದ್ದರು. ದಾಳಿಯ ವೇಳೆ ಆಟೋ ರಿಕ್ಷಾದಲ್ಲಿದ್ದ ೪೦ ಕೆಜಿ ಗೋಮಾಂಸ, ತೋಟದಲ್ಲಿ ಕಟ್ಟಿಹಾಕಿದ್ದ ೪ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಸಿಬಂದಿ ಜನಾರ್ದನ, ಸುರೇಶ್, ವರ್ಗೀಸ್, ಬಸವರಾಜು, ವಿಶಾಲಾಕ್ಷಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ