ವಿಡಿಯೋ, ಚಿತ್ರಗಳು ಮತ್ತು ವಿವರಗಳಿಗೆ ಕ್ಲಿಕ್ ಮಾಡಿರಿ
ಈ ಸಂದರ್ಭ ಊರಿಗೆ ಹೋಗುತ್ತೇವೆ ಎಂದು ಹಠ ಹಿಡಿದಿದ್ದ ಕಾರ್ಮಿಕರನ್ನು ಮಧ್ಯರಾತ್ರಿ ಆಗಮಿಸಿದ್ದ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಎಸ್. ಐ. ಪ್ರಸನ್ನ ಮನವೊಲಿಸಿದ್ದರು. ಬಳಿಕ ಎರಡು ದಿನಗಳಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಸಹಿತ ಅಗತ್ಯ ದಾಖಲೆಗಳ ಕ್ರೋಢೀಕರಣವಾದ ನಂತರ ಶುಕ್ರವಾರ ರಾತ್ರಿ ರೈಲಿಗೆ ಕಳುಹಿಸುವ ಏರ್ಪಾಡು ಮಾಡಲಾಯಿತು. ಅದರಂತೆ ಶುಕ್ರವಾರ ಕೆ.ಎಸ್.ಆರ್.ಟಿ.ಸಿ.ಯ 18 ಬಸ್ಸುಗಳಲ್ಲಿ ಅವರನ್ನು ಕಳುಹಿಸಲಾಯಿತು.
ತಹಸೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲಂಟೈನ್ ಡಿಸೋಜ, ಕೆ.ಎಸ್.ಆರ್.ಟಿ.ಸಿ. ವಿಭಾಗ ಸಂಚಲನಾಧಿಕಾರಿ ಮುರಳೀಧರ ಆಚಾರ್ಯ, ಘಟಕಾಧಿಕಾರಿ ಶ್ರೀಶ ಭಟ್, ಕೆಎಸ್ಸಾರ್ಟಿಸಿ ಟ್ರಾಫಿಕ್ ಇನ್ಸ್ ಪೆಕ್ಟರ್ ಗಣೇಶ ಪೈ, ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸ್ಐ ಪ್ರಸನ್ನ, ಕಂದಾಯ ಇಲಾಖೆಯ ಆರ್. ಐಗಳಾದ ರಾಮ ಕಾಟಿಪಳ್ಳ, ದಿವಾಕರ್ ಮುಗುಳ್ಯ, ನವೀನ್ ಬೆಂಜನಪದವು, ಶಿರಸ್ತೇದಾರ್ ಶ್ರೀಧರ್, ರಾಜೇಶ್ ನಾಯ್ಕ್ ಮುಖಂಡರಾದ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕೆ.ಹರಿಕೃಷ್ಣ ಬಂಟ್ವಾಳ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಸಹಾಯವಾಣಿ ತಂಡದ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.
ಎರಡು ದಿನಗಳ ಕಾಲ ರಾಜೇಶ್ ನಾಯ್ಕ್ ಮುತುವರ್ಜಿಯಲ್ಲಿ ನಾನಾ ಇಲಾಖೆಗಳ ಸಿಬ್ಬಂದಿ, ಸಹಾಯವಾಣಿ ತಂಡದ ಸದಸ್ಯರು ಊಟೋಪಚಾರ ಹಾಗೂ ಇತರ ವ್ಯವಸ್ಥೆಗಳನ್ನು ಒದಗಿಸುವುದರಲ್ಲಿ ಶ್ರಮಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…