ಬಂಟ್ವಾಳ

ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್: ಸೂಕ್ತ ನಿರ್ವಹಣೆಗೆ ಪಿಡಿಒಗಳಿಗೆ ಸೂಚನೆ

ವಿಡಿಯೋ, ಚಿತ್ರ ಮತ್ತು ಸುದ್ದಿಗಾಗಿ ಕ್ಲಿಕ್ ಮಾಡಿರಿ

ಜಾಹೀರಾತು

ಹೊರರಾಜ್ಯಗಳಿಂದ ಬಂಟ್ವಾಳ ತಾಲೂಕಿಗೆ ಆಗಮಿಸುವವರನ್ನು ಕ್ವಾರಂಟೈನ್ ನಲ್ಲಿರಿಸುವ ಸಂದರ್ಭ ಆಯಾ ಗ್ರಾಪಂಗಳ ಪಿಡಿಒಗಳಿಗೆ ಹೆಚ್ಚಿನ ಜವಾಬ್ದಾರಿ ಇದ್ದು ಇದರ ನಿರ್ವಹಣಾ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚನೆ ನೀಡಿದ್ದಾರೆ.

ಬಂಟ್ವಾಳ ಬಂಟರ ಭವನದಲ್ಲಿ ಶುಕ್ರವಾರ ಕರೆದ ವಿಧಾನಸಭಾ ಕ್ಷೇತ್ರದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲೂ ಈ ಕುರಿತು ನಿರ್ಲಕ್ಷ್ಯ ಮಾಡದೆ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ನಡೆಸಬೇಕು ಎಂದರು.

ಈ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಹೊರರಾಜ್ಯಗಳಿಂದ ಬಂದವರು ಗ್ರಾಮದಲ್ಲಿ ಎಲ್ಲೂ ಇಳಿಯದೆ ನೇರವಾಗಿ ಸೂಚಿಸಿದ ಜಾಗಗಳಿಗೇ ತಲುಪಬೇಕು ಎಂದರು. ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಲಹೆ ಸೂಚನೆಗಳನ್ನು ನೀಡಿದರು. ಇದೀಗ ಪ್ರಥಮ ಹಂತದಲ್ಲಿ ಹೊರರಾಜ್ಯಗಳಿಂದ ತಂಡ ಬರುತ್ತಿದ್ದು, ಇನ್ನು ಎರಡನೇ ಹಂತಕ್ಕೂ ಸಿದ್ಧತೆಗಳು ಆಗಬೇಕಿದೆ ಎಂಬ ಮಾಹಿತಿ ನೀಡಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.