ಬಂಟ್ವಾಳ

ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್: ಸೂಕ್ತ ನಿರ್ವಹಣೆಗೆ ಪಿಡಿಒಗಳಿಗೆ ಸೂಚನೆ

ವಿಡಿಯೋ, ಚಿತ್ರ ಮತ್ತು ಸುದ್ದಿಗಾಗಿ ಕ್ಲಿಕ್ ಮಾಡಿರಿ

ಜಾಹೀರಾತು

ಹೊರರಾಜ್ಯಗಳಿಂದ ಬಂಟ್ವಾಳ ತಾಲೂಕಿಗೆ ಆಗಮಿಸುವವರನ್ನು ಕ್ವಾರಂಟೈನ್ ನಲ್ಲಿರಿಸುವ ಸಂದರ್ಭ ಆಯಾ ಗ್ರಾಪಂಗಳ ಪಿಡಿಒಗಳಿಗೆ ಹೆಚ್ಚಿನ ಜವಾಬ್ದಾರಿ ಇದ್ದು ಇದರ ನಿರ್ವಹಣಾ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚನೆ ನೀಡಿದ್ದಾರೆ.

ಜಾಹೀರಾತು

ಬಂಟ್ವಾಳ ಬಂಟರ ಭವನದಲ್ಲಿ ಶುಕ್ರವಾರ ಕರೆದ ವಿಧಾನಸಭಾ ಕ್ಷೇತ್ರದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲೂ ಈ ಕುರಿತು ನಿರ್ಲಕ್ಷ್ಯ ಮಾಡದೆ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ನಡೆಸಬೇಕು ಎಂದರು.

ಈ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಹೊರರಾಜ್ಯಗಳಿಂದ ಬಂದವರು ಗ್ರಾಮದಲ್ಲಿ ಎಲ್ಲೂ ಇಳಿಯದೆ ನೇರವಾಗಿ ಸೂಚಿಸಿದ ಜಾಗಗಳಿಗೇ ತಲುಪಬೇಕು ಎಂದರು. ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಲಹೆ ಸೂಚನೆಗಳನ್ನು ನೀಡಿದರು. ಇದೀಗ ಪ್ರಥಮ ಹಂತದಲ್ಲಿ ಹೊರರಾಜ್ಯಗಳಿಂದ ತಂಡ ಬರುತ್ತಿದ್ದು, ಇನ್ನು ಎರಡನೇ ಹಂತಕ್ಕೂ ಸಿದ್ಧತೆಗಳು ಆಗಬೇಕಿದೆ ಎಂಬ ಮಾಹಿತಿ ನೀಡಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ