ಕವರ್ ಸ್ಟೋರಿ

40 ಅಡಿ ಆಳದ ಬಾವಿ – LOCKDOWN ನಲ್ಲಿ ಕೃಷಿಕನ ಸಾಧನೆ

21 ದಿನಗಳಲ್ಲಿ 40 ಅಡಿ ಆಳದ ಬಾವಿಯನ್ನು ಒಬ್ಬನೇ ಕೊರೆದು ಯಶಸ್ವಿಯಾಗಿ ಗಿಡಗಳಿಗೆ ನೀರುಣಿಸಲು ತಯಾರಾದವರು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪೊರ್ಸಪಾಲು ನಿವಾಸಿ ನೋಣಯ್ಯ ಪೂಜಾರಿ.

ಜಾಹೀರಾತು

ಈ ಸಾಧನೆಯನ್ನು ಅವರು ನಡೆಸಿದ್ದು ಲಾಕ್ಡೌನ್ ಅವಧಿಯಲ್ಲಿ. ಕೃಷಿ ಮಾಡಲೆಂದು ಅಡಕೆ ಗಿಡಗಳು ನೆಟ್ಟರೆ, ಉಣಿಸಲು ನೀರಿಲ್ಲ. ಕಳೆದ ಬೇಸಗೆಯಲ್ಲಿ ಸಂಕಷ್ಟ. ಈ ಬೇಸಗೆಯಲ್ಲಿ ಹಾಗಾಗಬಾರದು ಎಂದು ಯೋಚಿಸಿ ಬಾವಿ ನಿರ್ಮಿಸಲು ಹೊರಟರು. ಕೃಷಿ ಕಾರ್ಯಗಳನ್ನು ಮಾಡುವುದು, ಬೀಡಿ ಕಟ್ಟುವುದು, ಪೂಜೆ ಕೆಲಸಗಳಿಗೆ ಸಹಾಯಕರಾಗಿ ಹೋಗುವ ನೋಣಯ್ಯ ಪೂಜಾರಿ ಮನೆಯಲ್ಲಿ ಮಡದಿ, ಮೂರು ಮಕ್ಕಳೊಂದಿಗೆ ತಮ್ಮ ಜಮೀನಿಗೆ ಸಂಬಂಧಪಟ್ಟ ಗುಡ್ಡ ಪ್ರದೇಶದಲ್ಲಿ ಪತ್ನಿ ಹಾಗು ಮೂವರು ಮಕ್ಕಳ ಸಹಾಯದೊಂದಿಗೆ ಬಾವಿ ನಿರ್ಮಿಸಲು ಹೊರಟರು.

ಏಪ್ರಿಲ್ 25ರಂದು ಬಾವಿ ತೋಡಲು ಹೊರಟ ಅವರು ಮೇ.16ಕ್ಕೆ 40 ಅಡಿ ಆಳ ಕೊರೆದಾಗ 10 ಬಕೆಟ್ ನೀರು ಸಿಕ್ಕಿದೆ ಎನ್ನುತ್ತಾರೆ ಅವರು. ಮೊದಲ ಏಳು ದಿನ ಅರ್ಧ ದಿನ ಕೆಲಸ ಮಾಡಿದರೆ, ಸಂಕ್ರಾಂತಿ ಸಹಿತ ಮೂರು ದಿನ ಹೊರತುಪಡಿಸಿದರೆ, ಪ್ರತಿದಿನ ಬೆಳಗ್ಗೆ 9 ಗಂಟೆಗೆ ಹೊರಟರೆ, ಸಂಜೆ 5 ಗಂಟೆವರೆಗೆ ಬಾವಿ ತೋಡುತ್ತಿದ್ದೆ. ನನ್ನ 14 ವರ್ಷದ ಮಗ ಸಹಾಯಕನಾಗಿ ಬಂದರೆ, ಉಳಿದ ವೇಳೆ ಪತ್ನಿ, ದೊಡ್ಡ ಮಗಳು ಸಹಾಯ ಮಾಡುತ್ತಿದ್ದರು. ನಾನು, ಪತ್ನಿ, ನನ್ನ ಮಗ, ಇಬ್ಬರು ಪುತ್ರಿಯರು ಸೇರಿ ಬಾವಿ ತೋಡುವ ಕಾರ್ಯವನ್ನು ನಿಷ್ಠೆಯಿಂದ ಮಾಡಿದೆವು. ಶನಿವಾರ 10 ಬಕೆಟ್ ನೀರು ಸಿಕ್ಕಿದೆ. ಇದು ನಾವು ನಂಬಿದ ದೈವದೇವರು ನೀಡಿದ ವರಪ್ರಸಾದ ಎಂದೇ ನಂಬಿದ್ದೇನೆ ಎನ್ನುತ್ತಾರೆ ಅವರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts