ಕಾಮಗಾರಿ ಆವಾಂತರ: ಹೆದ್ದಾರಿಯಲ್ಲೇ ಕುರ್ಚಿ ಹಾಕಿ ಕುಳಿತು ಪ್ರತಿಭಟನೆ

ಬಿ.ಸಿ.ರೋಡು-ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿಯ ವೇಳೆ ಮಯ್ಯರಬೈಲು ಎಂಬಲ್ಲಿ  ಸ್ಥಳೀಯ ನಿವಾಸಿ ಉದಯ ಕುಮಾರ್ ರಾವ್ ಮಂಗಳವಾರ ತಮ್ಮ ಮನೆಯ ಮುಂದೆ ತೆಗೆದ ಚರಂಡಿಗೆ ಮೋರಿ ಹಾಕಿಲ್ಲ ಎಂದು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು. ಬಳಿಕ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ತಿಳಿಗೊಳಿಸಲಾಯಿತು.

ಜಾಹೀರಾತು

ಮೇ 17ರ ತಡರಾತ್ರಿ ಸುರಿದ ಮಳೆಗೆ ಮಯ್ಯರಬಲು ನಿವಾಸಿ ಉದಯಕುಮಾರ್ ರಾವ್ ಮನೆಯ ಆವರಣಕ್ಕೆ ನೀರು ಹಾಗೂ ಮಣ್ಣು ಕೊಚ್ಚಿಕೊಂಡು ಬಂದಿತ್ತು. ಡೆಕೋರೇಶನ್ ವೃತ್ತಿ ನಿರ್ವಹಿಸುವ ಅವರ ಡೆಕೋರೇಶನ್ ಸೊತ್ತುಗಳಿಗೂ ಇದರಿಂದ ಹಾನಿಯಾಗಿತ್ತು. ಅವರು ಚರಂಡಿ ಅಗೆದು ಮೋರಿ ಅಳವಡಿಸಬೇಕು ಎಂದು ಒತ್ತಡ ಹಾಕಿದ ಪರಿಣಾಮ ಕಾಮಗಾರಿ ನಿರ್ವಹಿಸುವ ಸಂಸ್ಥೆಯವರು ಕೇವಲ ಚರಂಡಿ ತೆಗೆದು ಹೋಗಿದ್ದರು. ಉದಯಕುಮಾರ್ ಅವರ ಕಾಲಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಹೀಗಾಗಿ ಅವರಿಗೆ ನಡೆದುಕೊಂಡು ಹೋಗುವುದಕ್ಕೆ ಕಷ್ಟವಾಗುತ್ತಿದೆ. ಮಂಗಳವಾರ ವೈದ್ಯರ ಬಳಿ ಹೋಗಿ ಹಿಂದುರುಗಿದ ಅವರು ಮೋರಿ ಹಾಕದೆ ಮನೆಗೆ ಹೋಗುವುದಿಲ್ಲ ಎಂದು ರಸ್ತೆಯಲ್ಲೇ ಕುರ್ಚಿ ಹಾಕಿ ಕುಳಿದರು. ಈ ವಿಚಾರ ಪೊಲೀಸರಿಗೆ ತಿಳಿದು ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಮೋರಿ ಹಾಕುವಂತೆ ಕಾಮಗಾರಿ ನಡೆಸುವವರಿಗೆ ಸೂಚಿಸಿದ ಬಳಿಕ ಮೋರಿ ಅಳವಡಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾಮಗಾರಿ ಆವಾಂತರ: ಹೆದ್ದಾರಿಯಲ್ಲೇ ಕುರ್ಚಿ ಹಾಕಿ ಕುಳಿತು ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*