ಜಿಲ್ಲಾ ಸುದ್ದಿ

ಈ ಶೈಕ್ಷಣಿಕ ವರ್ಷ ಹೇಗಿರಬೇಕು? ವಿವಿ ಕುಲಪತಿ ಜೊತೆ ಎಬಿವಿಪಿ ನಿಯೋಗ ಭೇಟಿ, ಸಲಹೆ, ಮನವಿಯರ್ಪಣೆ

ಲಾಕ್ ಡೌನ್ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣದ ವಾತಾವರಣವನ್ನು ನಿರ್ಮಾಣ ಮಾಡುವುದರ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಎಡಪಡಿತ್ತಾಯ ಹಾಗೂ ಕುಲ ಸಚಿವರಾದ ರಾಜು ಮೊಗವೀರ ಅವರನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ವತಿಯಿಂದ ಬುಧವಾರ ವಿವಿಯಲ್ಲಿ ಭೇಟಿ ಮಾಡಲಾಯಿತು. ಈ ವೇಳೆ ವಿವಿಧ ಬೇಡಿಕೆಯುಳ್ಳ ಮನವಿ ಸಲ್ಲಿಸಿ, ಚರ್ಚಿಸಲಾಯಿತು.

ಜಾಹೀರಾತು

ಮಂಗಳೂರು ವಿಶ್ವ ವಿದ್ಯಾನಿಲಯ ತನ್ನ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದೆಯಾದರೂ ಗ್ರಾಮೀಣ ಭಾಗದ ಹಾಗೂ ನೆಟ್ ವರ್ಕ್ ರಹಿತ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. ಹಾಗಾಗಿ ಆನ್ ಲೈನ್ ತರಗತಿ ನಡೆಸಿದರೂ ಲಾಕ್ ಡೌನ್ ತರುವಾಯ 20 ರಿಂದ 25 ದಿನಗಳ ಕಾಲ ಪುನರಾವರ್ತನ ತರಗತಿಗಳನ್ನು ನಡೆಸಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸೆಮಿಸ್ಡರ್ ಪರೀಕ್ಷೆ ನಡೆಸುವ ಕುರಿತು ಯೋಜನೆಗಳನ್ನು ರೂಪಿಸಿ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಪರೀಕ್ಷೆಗಳನ್ನು ನಡೆಸಿ ಸರಿಯಾದ ಫಲಿತಾಂಶ ನೀಡಬೇಕು ಹಾಗೂ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕವನ್ನು ಹೆಚ್ಚಿಸದಂತೆ ಆದೇಶ ಹೊರಡಿಸ ಬೇಕು ಎಂದು ಅ.ಭಾ.ವಿ.ಪ. ನಿಯೋಗವು ಕುಲಪತಿ ಹಾಗೂ ಕುಲ ಸಚಿವರಿಗೆ ಮನವಿಯನ್ನು ಸಲ್ಲಿಸಿ, ಚರ್ಚಿಸಿದರು.

ಜಾಹೀರಾತು

ನಿಯೋಗದಲ್ಲಿ ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಚಾಲಕ ಆಶೀಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಶಾನ್ ಆಳ್ವ, ತಾ. ಸಂಚಾಲಕ ಹರ್ಷಿತ್ ಕೊಯಿಲ, ನಗರ ಸಹ ಕಾರ್ಯದರ್ಶಿ ನಾಗರಾಜ್ ಹಾಗೂ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿ ಸಂಜನ್ ಉಪಸ್ಥಿತರಿದ್ದರು.

ಇಡೀ ದೇಶವೇ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಜನರು ಊದ್ಯೋಗವಕಾಶಗಳಿಲ್ಲಿದೇ ಕಂಗಾಲಾಗಿ ಹೋಗಿದ್ದಾರೆ . ಇಂತಹ ಸಂದರ್ಭದಲ್ಲಿ ಕೆಲವು ಕಾಲೇಜುಗಳು ವಿದ್ಯಾರ್ಥಿಗಳ ಪೋಷಕರ ಬಳಿ ಬಾಕಿಯಿರುವ ಕಾಲೇಜು ಶುಲ್ಕವನ್ನು ಮರುಪಾವತಿ ಮಾಡಲು ಒತ್ತಾಯಿಸುತ್ತಿದೆ. ಹಾಗೆಯೇ ಕೆಲವು ಹಾಸ್ಟೆಲ್ ಗಳಲ್ಲಿ ಹೊರಜಿಲ್ಲೆಗಳಿಂದ ಬಂದತಹ ಜನರನ್ನು ಕ್ವಾರಂಟ್ವೆನ್ ಮಾಡುತ್ತಿರುವುದರಿಂದ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ತಾವುಗಳು ಈ ಕೂಡಲೇ ಕಾಲೇಜು ಶುಲ್ಕ ಮರುಪಾವತಿ ಮಾಡುವ ದಿನಾಂಕಗಳನ್ನು ವಿಸ್ತರಿಸುವ ಮೂಲಕ ವಿದ್ಯಾರ್ಥಿ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿ ಅಭಾವಿಪ ಮನವಿಯನ್ನು ನೀಡಿದೆ . ಈ ಸಂದರ್ಭದಲ್ಲಿ ಅಭಾವಿಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ಹಾಗೂ ಹರ್ಷಿತ್ ಕೊಯಿಲ, ದಿನೇಶ್ ಕೊಯಿಲ, ಅಖಿಲಾಷ್ , ನಾಗರಾಜ್ ಬಂಟ್ವಾಳದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ