ಬಂಟ್ವಾಳ

ಸೀಲ್ ಡೌನ್ ವ್ಯಾಪ್ತಿ ತೆರವಿಗೆ ಒತ್ತಾಯ: ಬಂಟ್ವಾಳದಲ್ಲಿ ಪ್ರತಿಭಟನೆ

ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಏ.19ರಂದು ರಾತ್ರಿ ಬಂಟ್ವಾಳದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಇದರ ವ್ಯಾಪ್ತಿ ನಿಗದಿಪಡಿಸಿದ್ದು ಸರಿಯಾಗಿಲ್ಲ, ಇವುಗಳ ಪೈಕಿ ಕೆಲ ಪ್ರದೇಶಗಳನ್ನು ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ಪ್ರತಿಭಟನೆ ಬಂಟ್ವಾಳ ಪೇಟೆಯಲ್ಲಿ ನಡೆಯಿತು.

ಜಾಹೀರಾತು

ಪುರಸಭೆ ಸದಸ್ಯ ಎ. ಗೋವಿಂದ ಪ್ರಭು ನೇತೃತ್ವದಲ್ಲಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಬಳಿ ರಸ್ತೆಯನ್ನು ಮುಚ್ಚಲಾದ ಬ್ಯಾರಿಕೇಡ್ ಸಮೀಪ ಪ್ರತಿಭಟನೆ ನಡೆದಿದ್ದು, ಮಹಿಳೆಯರು ಸೇರಿದಂತೆ ಹಲವರು ಭಾಗವಹಿಸಿದರು. ತಹಸೀಲ್ದಾರ್ ರಶ್ಮಿ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಬಂಟ್ವಾಳ ನಗರ ಠಾಣೆಯ ಎಸ್ ಐ ಅವಿನಾಶ್ ಮತ್ತು ಸಿಬ್ಬಂದಿ ಬಂದೋಬಸ್ತ್ ನಡೆಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.