ಬಂಟ್ವಾಳ

ಸೀಲ್ ಡೌನ್ ವ್ಯಾಪ್ತಿ ತೆರವಿಗೆ ಒತ್ತಾಯ: ಬಂಟ್ವಾಳದಲ್ಲಿ ಪ್ರತಿಭಟನೆ

ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಏ.19ರಂದು ರಾತ್ರಿ ಬಂಟ್ವಾಳದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಇದರ ವ್ಯಾಪ್ತಿ ನಿಗದಿಪಡಿಸಿದ್ದು ಸರಿಯಾಗಿಲ್ಲ, ಇವುಗಳ ಪೈಕಿ ಕೆಲ ಪ್ರದೇಶಗಳನ್ನು ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ಪ್ರತಿಭಟನೆ ಬಂಟ್ವಾಳ ಪೇಟೆಯಲ್ಲಿ ನಡೆಯಿತು.

ಜಾಹೀರಾತು

ಪುರಸಭೆ ಸದಸ್ಯ ಎ. ಗೋವಿಂದ ಪ್ರಭು ನೇತೃತ್ವದಲ್ಲಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಬಳಿ ರಸ್ತೆಯನ್ನು ಮುಚ್ಚಲಾದ ಬ್ಯಾರಿಕೇಡ್ ಸಮೀಪ ಪ್ರತಿಭಟನೆ ನಡೆದಿದ್ದು, ಮಹಿಳೆಯರು ಸೇರಿದಂತೆ ಹಲವರು ಭಾಗವಹಿಸಿದರು. ತಹಸೀಲ್ದಾರ್ ರಶ್ಮಿ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಬಂಟ್ವಾಳ ನಗರ ಠಾಣೆಯ ಎಸ್ ಐ ಅವಿನಾಶ್ ಮತ್ತು ಸಿಬ್ಬಂದಿ ಬಂದೋಬಸ್ತ್ ನಡೆಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ