ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ
https://chat.whatsapp.com/LNdS3qwTHVYLnGnKXmfSCn
ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಕಳವು ನಡೆಸಿ ಹತ್ಯೆ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಈ ಬಗ್ಗೆ ತನಿಖೆ ನಡೆಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಅವರಿಗೆ ಮನವಿ ಮಾಡಿದರು.
ಗೋರಕ್ಷ ಪ್ರಮುಖ್ ಸರಪಾಡಿ ಆಶೋಕ್ ಶೆಟ್ಟಿ ಸರಪಾಡಿ , ಜಿಲ್ಲಾ ಸಹಸಂಚಾಲಕ ಭರತ್ ಕುಮ್ಡೇಲು, ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ಸುರೇಶ್ ಬೆಂಜನಪದವು, ಭಜರಂಗದಳ ಬಂಟ್ವಾಳ ಸಂಚಾಲಕ ಶಿವಪ್ರಸಾದ್ ತುಂಬೆ, ಬಂಟ್ವಾಳ ಪ್ರಖಂಡ ಗೋರಕ್ಷಾಪ್ರಮುಖ್ ಅಭಿನ್ ರೈ,, ಬಂಟ್ವಾಳ ಪ್ರಖಂಡ ಸಹ ಸಂಚಾಲಕ ಭುವಿತ್ ಶೆಟ್ಟಿ, ಬಂಟ್ವಾಳ ಪ್ರಖಂಡ ಸಹಸಂಚಾಲಕ ಸಂತೋಷ್ ಕುಲಾಲ್, ಆಕೇಶ್ ಬೆಂಜನಪದವು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…