ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಆದಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾಗಣೆ ತಂತ್ರಿ ಎನ್. ಸುಬ್ರಹ್ಮಣ್ಯ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ಶಿಲಾಮಯ ಗರ್ಭಗುಡಿ ತೀರ್ಥ ಮಂಟಪ ಸುತ್ತು ಗೋಪುರ ವಾಸ್ತು ಪ್ರಕಾರವಾಗಿ ನಿರ್ಮಾಣಗೊಳ್ಳಲಿದೆ. ಸಮಾರಂಭದಲ್ಲಿ ಎಂ. ವೆಂಕಟೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಯತೀಶ್ ಭಂಡಾರಿ, ರಾಮಕೃಷ್ಣ ಭಟ್, ಯಶೋಧರ, ಪ್ರದೀಪ್ ಶೆಟ್ಟಿ, ನಿತಿನ್ ಅರಸ, ಸುರೇಶ್ ಬಂಗೇರ, ಲಿಂಗಪ್ಪ ದೋಟ, ಪದ್ಮನಾಭ ಭಟ್ ಮೊದಲಾದವರು ಉಪಸ್ಥಿತರಿದ್ದರು ಸರಕಾರದ ನಿಯಮದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರಮವನ್ನು ನಡೆಸಲಾಯಿತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)