ನೇತ್ರಾವತಿ ಜೀವರಕ್ಷಕರಿಗೆ ಜೀವನ್ ರಕ್ಷಾ ಪದಕ್ ಪ್ರಶಸ್ತಿಗೆ ಶಿಫಾರಸು ಮಾಡಿ: ಆಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ

ಪಾಣೆಮಂಗಳೂರಿನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನ ರಕ್ಷಣೆಗೆ ಮುಂದಾದ ಗೂಡಿನಬಳಿಯ ಯುವಕರ ಶೌರ್ಯವನ್ನು ಗೌರವಿಸಿ ಕೇಂದ್ರ ಸರಕಾರದಿಂದ ಕೊಡಲಾಗುವ ಜೀವನ್ ರಕ್ಷಾ ಪದಕ್ ಪ್ರಶಸ್ತಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

ಜಾಹೀರಾತು

ಪಕ್ಷದ ದ.ಕ.ಜಿಲ್ಲಾಧ್ಯಕ್ಷ ಸುಲೈಮಾನ್ ಕಲ್ಲರ್ಪೆ ಬುಧವಾರ ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಜೀವವನ್ನು ಪಣಕ್ಕಿಟ್ಟು ಯುವಕರ ತಂಡ ಈ ಹಿಂದೆಯೂ ಹಲವು ಜೀವಗಳನ್ನು ರಕ್ಷಿಸಿದ್ದು, ಆದರೆ ಸರಕಾರವಾಗಲಿ, ಜಿಲ್ಲಾ-ತಾಲೂಕು ಆಡಳಿತವಾಗಲಿ ಗುರುತಿಸುವ ಕಾರ್ಯ ಮಾಡದೇ ಇರುವುದು ಬೇಸರದ ವಿಚಾರ. ಮುಂದಿನ ದಿನಗಳಲ್ಲಿ ಪಕ್ಷವು ಈ ನಿಟ್ಟಿನಲ್ಲಿ ಹೋರಾಟ ಮಾಡಲಿದೆ ಎಂದರು. ಈ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಆರೋಪ, ಪ್ರತ್ಯಾರೋಪದ ಹೇಳಿಕೆಗಳನ್ನು ರಾಜಕೀಯ ಪಕ್ಷಗಳು ನೀಡಿದ್ದು, ಅದನ್ನು ಪಕ್ಷ ಖಂಡಿಸುತ್ತದೆ. ಇವರು ಜನಪ್ರತಿನಿಧಿಗಳ ನೆಲೆಯಲ್ಲಿ ಸಾಹಸಿಗಳಿಗೆ ಪ್ರಶಸ್ತಿ ನೀಡುವಂತೆ ಸರಕಾರಕ್ಕೆ ಶಿಫಾರಸು ಮಾಡಬೇಕಿತ್ತು ಎಂದರು. ಕಲ್ಲಡ್ಕದ ಮೃತ ಯುವಕ ನಿಶಾಂತ್ ಮನೆಗೆ ಪಕ್ಷದ ನಿಯೋಗ ತೆರಳಿದ್ದು, ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ನೆರವು ನೀಡಬೇಕು, ಇಂಥ ಆತ್ಮಹತ್ಯೆಗಳು ನಿಲ್ಲಬೇಕು ಎಂದವರು ಒತ್ತಾಯಿಸಿದರು.

ಸಂಜೀವಿನಿ ಪ್ರಶಸ್ತಿ ಪ್ರದಾನ:  ಇದೇ ವೇಳೆ ಮಹಮ್ಮದ್, ಝಾಹೀದ್, ತೌಸೀಫ್, ಸಮೀರ್, ಆರಿಫ್ ಪಿ.ಜೆ, ಮುಖ್ತಾರ್ ಅವರಿಗೆ ಪಕ್ಷದ ವತಿಯಿಂದ ಸಂಜೀವಿನಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪಕ್ಷದ ನಾನಾ ವಿಭಾಗಗಳ ನಾಯಕರಾದ ಎಸ್.ಎಂ.ಮುತಾಲಿಬ್, ಮೊಯಿನ್ ಕಮರ್, ಶ್ರೀಕಾಂತ್ ಸಾಲ್ಯಾನ್, ದಿವಾಕರ್ ಬೋಳೂರು, ತಫ್ಲೀಲ್ ಯು ಅಭಿನಂದಿಸಿ ಮಾತನಾಡಿದರು. ಸತ್ತಾರ್ ಗೂಡಿನಬಳಿ ಉಪಸ್ಥಿತರಿದ್ದರು. ಸಲೀಂ ಬೋಳಂಗಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೇತ್ರಾವತಿ ಜೀವರಕ್ಷಕರಿಗೆ ಜೀವನ್ ರಕ್ಷಾ ಪದಕ್ ಪ್ರಶಸ್ತಿಗೆ ಶಿಫಾರಸು ಮಾಡಿ: ಆಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*