ಜಿಲ್ಲಾ ಸುದ್ದಿ

ಒಂದೇ ದಿನ ದ.ಕ, ಉಡುಪಿಯಲ್ಲಿ 53 ಕೇಸ್, ರಾಜ್ಯದಲ್ಲಿಂದು 115 ಮಂದಿಗೆ ಕೊರೊನಾ ಪಾಸಿಟಿವ್ ದೃಢ

  • ವಿವರಗಳು ಇಲ್ಲಿವೆ

ರಾಜ್ಯದಲ್ಲಿ ಒಂದೇ ದಿನ 115 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇವುಗಳ ಪೈಕಿ ಉಡುಪಿಯಲ್ಲಿ 29, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಪ್ರಕರಣಗಳು. ಒಂದೇ ದಿನ ದಕ್ಷಿಣ ಕನ್ನಡದಲ್ಲಿ 24 ಪ್ರಕರಣಗಳು ಪತ್ತೆಯಾಗಿರುವುದು ಇದೇ ಮೊದಲು. ಇವತ್ತು 53 ರೋಗಿಗಳು ರಾಜ್ಯದಲ್ಲಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು,. ಒಟ್ಟು 834 ಗುಣಮುಖರಾದಂತಾಗಿದೆ. ಆದರೆ 1650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕಂಡುಬಂದ ಹೊಸ ಪ್ರಕರಣಗಳ ಪೈಕಿ 95 ಅಂತಾರಾಜ್ಯ ಪ್ರಯಾಣಿಕರಾದರೆ, 2 ವಿದೇಶಿ ಪ್ರಯಾಣಿಕರು. ಒಟ್ಟು 2533 ಪ್ರಕರಣಗಳು ಇದುವರೆಗೆ ರಾಜ್ಯದಲ್ಲಿ ದಾಖಲಾಗಿವೆ.

ಜಾಹೀರಾತು

ಉಡುಪಿ  29, ದಕ್ಷಿಣ ಕನ್ನಡ  24, ಹಾಸನ 13, ಬೀದರ್ 12, ಬೆಂಗಳೂರು 9, ಯಾದಗಿರಿ 7, ಚಿತ್ರದುರ್ಗ 6, ಕಲಬುರ್ಗಿ 5, ಹಾವೇರಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರು 1 ಪ್ರಕರಣಗಳು ಇಂದು ದಾಖಲಾಗಿವೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾಗಿದೆ. ಇಂದು ಒಟ್ಟು 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಳಗ್ಗೆ 6 ಮಂದಿಗೆ ಬಂದದ್ದು ವರದಿಯಾದರೆ, ಸಂಜೆ 18 ಮಂದಿಯ ಪ್ರಕರಣ ವರದಿಯಾಯಿತು. 23 ಮಂದಿ ಮಹಾರಾಷ್ಟ್ರದಿಂದ ಬಂದವರು. ಒಬ್ಬರು ಕೇರಳದಿಂದ ಬಂದವರು. ಎಲ್ಲರೂ ಜಿಲ್ಲೆಯ ವಿವಿಧೆಡೆ ಕ್ವಾರಂಟೈನ್ ನಲ್ಲಿ ಇದ್ದವರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts