ಬಂಟ್ವಾಳ

ಎಎಂಆರ್ ನಲ್ಲಿ ನೀರು ಸಂಗ್ರಹಣೆ, ಹೆಚ್ಚುವರಿ ನೀರು ಹೊರಕ್ಕೆ: ನೇತ್ರಾವತಿ ನದಿ ತೀರವಾಸಿಗಳಿಗೆ ಎಚ್ಚರಿಕೆ

AMR DAM (File Photo)

ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎಎಂಆರ್ ಅಣೆಕಟ್ಟಿನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಮೇ 31ರಿಂದ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಬಳಿಕ ನದಿ ನೀರಿನ ಮಟ್ಟ ಏರುವುದರಿಂದ ನದೀ ತೀರದ ಆಸುಪಾಸಿನ ಜನರು ಮುಂಜಾಗರೂಕತೆ ವಹಿಸಬೇಕು ಎಂದು ಹೇಳಿದ್ದು, ಇದರಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಆಡಳಿತದಿಂದ ನದೀ ತೀರವಾಸಿಗಳಿಗೆ ಧ್ವನಿವರ್ಧಕ ಮೂಲಕ ಎಚ್ಚರಿಕೆಯ ಸಂದೇಶಗಳನ್ನು ನೀಡಲಾಗುತ್ತಿದೆ.

ಎಎಂಆರ್ ಅಣೆಕಟ್ಟಿನಲ್ಲಿ ಶೇಖರಿಸಿದ ನೀರನ್ನು ವಿದ್ಯುತ್ ಉತ್ಪಾದನೆಗಾಗಿ ಬಳಸಿ, ಅದೇ ನೀರನ್ನು ವಾಪಸ್ ನದಿಯ ಕೆಳಭಾಗದಲ್ಲಿ ಜೂನ್ 1ರಿಂದ ಅಥವಾ ನಂತರದ ದಿನಗಳಲ್ಲಿ ಬಿಡಲಾಗುವುದು. ಮಳೆಗಾಲ ಆರಂಭವಾದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು, ಅಣೆಕಟ್ಟಿಗೆ ಅಳವಡಿಸಿದ ಗೇಟುಗಳನ್ನು ತೆರೆದು, ನೀರನ್ನು ಕೆಳಭಾಗಕ್ಕೆ ಬಿಡಬೇಕಾಗುತ್ತದೆ. ಆದ್ದರಿಂದ ಮೇ 31ರಿಂದ ನದಿಯ ಅಣೆಕಟ್ಟಿನ ಕೆಳಭಾಗದ ಹಾಗೂ ಮೇಲ್ಭಾಗದ ಇಕ್ಕೆಲಗಳಲ್ಲಿ ನೀರಿನ ಮಟ್ಟ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳಿತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆಯ ವಿಷಯವಾಗಿ ಜನರಿಗೆ ಮುಂಜಾಗರೂಕತೆ ವಹಿಸಲು ನಿರ್ದೇಶನ ನೀಡಲು ಬಂಟ್ವಾಳ ತಹಸೀಲ್ದಾರ್ ಸಹಿತ ದ.ಕ. ಜಿಲ್ಲಾಧಿಕಾರಿಗೆ ಎಎಂಆರ್ ವಿನಂತಿಸಿದೆ. ಇದಲ್ಲದೆ ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತರು, ಎಂಸಿಸಿ ಆಯುಕ್ತರು, ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕರು, ಅಣೆಕಟ್ಟು ವ್ಯಾಪ್ತಿಗೆ ಒಳಪಡುವ ಭಾಗದ ಕಂದಾಯ ನಿರೀಕ್ಷಕರು, ಗ್ರಾಮಗಳಾದ ನರಿಕೊಂಬು, ತುಂಬೆ, ಕಡೇಶಿವಾಲಯ, ಬಾಳ್ತಿಲ, ಸಜಿಪಮೂಡ, ನಾವೂರು, ಸರಪಾಡಿ, ಬರಿಮಾರು, ಸಜಿಪಮುನ್ನೂರು ಗ್ರಾಮಗಳ ಪಿಡಿಒಗಳಿಗೂ ಎಎಂಆರ್ ಪತ್ರಮುಖೇನ ಮಾಹಿತಿ ನೀಡಿದ್ದಾಗಿ ಎಎಂಆರ್ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.