ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸುಮಾರು 18 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ ಚೆಕ್ ವಿತರಿಸಿ ಪ್ರೋತ್ಸಾಹಿಸಲಾಯಿತು. ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಅದ್ಯಕ್ಷ ಪ್ರಭಾಕರ ಪ್ರಭು ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ್ ಶೆಟ್ಟಿ, ದಿನೇಶ್ ಪೂಜಾರಿ, ರಾಜೇಶ್ ಶೆಟ್ಟಿ, ಹರೀಶ್ ಆಚಾರ್ಯ, ದೇವರಾಜ್ ಸಾಲಿಯಾನ್ , ಮಂದರಾತಿ ಶೆಟ್ಟಿ, ಅರುಣ ಶೆಟ್ಟಿ.ಜಾರಪ್ಪ ನಾಯ್ಕ, ವೀರಪ್ಪ ಪರವ ಉಪಸ್ಥಿತರಿದ್ದರು. ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರತಿ ಶೆಟ್ಟಿ, ಸ್ವಾಗತಿಸಿದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…