ಡಿ.ಕೆ.ಶಿವಕುಮಾರ್ ಪದಗ್ರಹಣ ವೀಕ್ಷಣೆಗೆ ಬಂಟ್ವಾಳ ಕ್ಷೇತ್ರದಲ್ಲಿ ಸಿದ್ಧತೆ

ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಸಂಬಂಧಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ರಮಾನಾಥ ರೈ, ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೋಗಿ ಭಾಗವಹಿಸಲು ಆಗದೇ ಇರುವ ಕಾರಣ, ಪ್ರತಿ ಗ್ರಾಪಂ ಪಂಚಾಯಿತಿ ಮತ್ತು ಪುರಸಭಾ ವಾರ್ಡ್ ವ್ಯಾಪ್ತಿಯಲ್ಲಿ ಟಿ.ವಿ.ಗಳ ಮೂಲಕ ಮತ್ತು ಆಪ್ ಮೂಲಕ ಲೈವ್ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ಪುರಸಭಾ ವಾರ್ಡ್ ಗಳಲ್ಲಿ ಬಂಟ್ವಾಳ ಕಸ್ಬಾಕ್ಕೆ ಸಂಬಂಧಿಸಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಬಿ.ಮೂಡ ಗ್ರಾಮಕ್ಕೆ ಸಂಬಂಧಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿ, ಪಾಣೆಮಂಗಳೂರುಕಸಬಾಕ್ಕೆ ಸಂಬಂಧಿಸಿ ಮೇಲ್ಕಾರಿನ ಬಿರ್ವ ಸೆಂಟರ್ ನಲ್ಲಿ ನೇರಪ್ರಸಾರ ನಡೆಯಲಿದ್ದರೆ, ಉಳಿದ ಎಲ್ಲ ಗ್ರಾಪಂಗಳಲ್ಲೇ ವೀಕ್ಷಣೆ ನಡೆಯಲಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ಕ್ಷೇತ್ರ ವೀಕ್ಷಕರಾದ ಸುರೇಶ್ ಕೋಟ್ಯಾನ್, ಪ್ರಥ್ವೀರಾಜ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸುಬೋದ್ ಆಳ್ವ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯರಾದ ಧನಲಕ್ಷ್ಮೀ ಬಂಗೇರ, ಶಿವಪ್ರಸಾದ್ ಕನಪ್ಪಾಡಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಕ್ಷ ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಸಂಪತ್ ಕುಮಾರ್ ಶೆಟ್ಟಿ, ಮೋಹನ ಗೌಡ ಕಲ್ಮಂಜ, ಮಹಮ್ಮದ್ ನಂದಾವರ, ಜಗದೀಶ ಕೊಯ್ಲ, ಮಾಣಿಕ್ಯರಾಜ ಜೈನ್, ಪುರಸಭಾ ಸದಸ್ಯರಾದ ಜನಾರ್ದನ ಚಂಢ್ತಿಮಾರ್, ಗಂಗಾಧರ ಪೂಜಾರಿ, ಸಿದ್ದಿಕ್ ಗುಡ್ಡೆಯಂಗಡಿ, ಎಲ್ಲ ವಲಯ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ಇದೇ ವೇಳೆ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಲು ಹಾರಿದ ಯುವಕನ ರಕ್ಷಿಸಿದ ಗೂಡಿನಬಳಿ ಯುವಕರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಡಿ.ಕೆ.ಶಿವಕುಮಾರ್ ಪದಗ್ರಹಣ ವೀಕ್ಷಣೆಗೆ ಬಂಟ್ವಾಳ ಕ್ಷೇತ್ರದಲ್ಲಿ ಸಿದ್ಧತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*