ಮುಂದಿದೆ ಮಳೆಗಾಲ – ಸಮನ್ವಯತೆಯಿಂದ ಕೆಲಸ ಮಾಡಿದರೆ ಸಮಸ್ಯೆ ಉಲ್ಬಣವಾಗದು

  • ಮಳೆಗಾಲದ ಸಿದ್ಧತೆ ಎದುರಿಸಲು ಶಾಸಕ ರಾಜೇಶ್ ನಾಯ್ಕ್ ಮೀಟಿಂಗ್

ಜಾಹೀರಾತು

ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಇನ್ನೂ ಆಗಿಲ್ಲ. ಅದು ಶಿಕ್ಷಣ ಇಲಾಖೆ ಜವಾಬ್ದಾರಿ ನಮ್ಮದಲ್ಲ ಎನ್ನುವ ಹಾಗಿಲ್ಲ. ಗಡಿನಾಡ ಮಕ್ಕಳ ಸಹಿತ ತಾಲೂಕಿನ ಮಕ್ಕಳು ಮಳೆಗಾಲದಲ್ಲಿ ಪರೀಕ್ಷೆ ಬರೆಯುವ ಸನ್ನಿವೇಶವಿದು. ಇದೇ ರೀತಿ ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ಮಳೆಗಾಲದಲ್ಲಿ ಬರುವ ಸನ್ನಿವೇಶಗಳನ್ನು ಎದುರಿಸಬೇಕು. ಈಗಾಗಲೇ ಟಾಸ್ಕ್ ಪೋರ್ಸ್ ರಚನೆಯಾಗಿದೆ. ಇದು ಕೋವಿಡ್ ಹಿನ್ನೆಲೆಯಲ್ಲಿ ರಚನೆಗೊಂಡಿದ್ದು, ಇನ್ನಷ್ಟು ಇಲಾಖೆಗಳ ಅಧಿಕಾರಿಗಳನ್ನು ಸೇರಿಸಿ ತಂಡವಾಗಿಸಿಕೊಳ್ಳಿ. ಒಮ್ಮತದಿಂದ ಕೆಲಸ ಮಾಡಿ. ನನ್ನ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಕೂರಬೇಡಿ.

ಹೀಗೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೋಮವಾರ ಗ್ರಾಪಂ ಪಿಡಿಒಗಳಿಗೆ ಸಲಹೆ ನೀಡಿದರು.

ಬಂಟ್ವಾಳ ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಸೋಮವಾರ ಮಳೆಗಾಲದ ಮುಂಜಾಗ್ರತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಈಗಾಗಲೇ ಅಸ್ತಿತ್ವದಲ್ಲಿರುವ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಚುರುಕಾಗಿ ವ್ಯವಹರಿಸಬೇಕಿದ್ದು, ಮುಂಗಾರು ಎದುರಿಸಲು ಸನ್ನದ್ಧರಾಗಬೇಕಿದೆ ಎಂದು ಈ ಸಂದರ್ಭ ಅವರು ತಿಳಿಸಿದರು.

ಜಾಹೀರಾತು

ಈ ಸಂದರ್ಭ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್, ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಿದರು. ಮಳೆಗಾಲದ ಹಿನ್ನೆಲೆಯಲ್ಲಿ ಈಗಾಗಲೇ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಮುನ್ನಚ್ಚರಿಕೆಯಾಗಿ ಎರಡು ಬೋಟ್ ಗಳನ್ನು ಕಾದಿರಿಸಲಾಗಿದೆ. ಇನ್ನು ಹೆಚ್ಚುವರಿ 4 ಬೋಟ್‌ಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ಶಾಸಕರ ಗಮನಕ್ಕೆ ತಂದರು.

ಬಂಟ್ವಾಳ ಕ್ಷೇತ್ರದಲ್ಲಿ 25 ಎಕರೆ ಜಾಗವಿದ್ದರೆ ಸರಕಾರದಿಂದ ವಸತಿ ಶಾಲೆ ಮಂಜೂರಾಗಲಿದ್ದು, ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜತೆಗೆ ಜಾಗ ಗುರುತಿಸಿದರೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮಾರುಕಟ್ಟೆ, ವರ್ಕಿಂಗ್ ವಿಮೆನ್ಸ್ ಹಾಸ್ಟೆಲ್ ಕೂಡ ಮಂಜೂರಾಗಲಿದೆ ಎಂದು ಶಾಸಕರು ಸಭೆಗೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮುಂದಿದೆ ಮಳೆಗಾಲ – ಸಮನ್ವಯತೆಯಿಂದ ಕೆಲಸ ಮಾಡಿದರೆ ಸಮಸ್ಯೆ ಉಲ್ಬಣವಾಗದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*