ಗುಡ್ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 69 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮಂಗಳವಾರ ಗರ್ಭಿಣಿ ಸೇರಿದಂತೆ ಒಟ್ಟು 13 ಮಂದಿ ಡಿಸ್ಚಾರ್ಜ್ ಆದರು. ಇನ್ನೊಂದು ಗುಡ್ ನ್ಯೂಸ್ ಏನೆಂದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು ಯಾವುದೇ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿಲ್ಲ. ಇಂದು 113 ಮಂದಿಯ ಗಂಟಲು ದ್ರವ ಮಾದರಿಯ ಫಲಿತಾಂಶ ಗೊತ್ತಾಗಿದ್ದು, ಎಲ್ಲವೂ ನೆಗೆಟಿವ್. ಆಗಿದೆ. ಇನ್ನು 80 ಮಂದಿಯ ಫಲಿತಾಂಶ ಬರಲು ಬಾಕಿ ಇದೆ. 50 ಮಂದಿಯ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಲಾಗಿದೆ.

ಇದುವರೆಗೆ 137 ಪಾಸಿಟಿವ್ ಕೇಸ್ ಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿವೆ. ಇವುಗಳ ಪೈಕಿ 10 ಕೇಸ್ ಗಳು ಹೊರಜಿಲ್ಲೆ, ರಾಜ್ಯದವು. ಅಂದರೆ 127 ಮಂದಿ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳಿಗೇ ಪಾಸಿಟಿವ್ ಬಂದಿದೆ. ಅವರ ಪೈಕಿ ಚಿಕಿತ್ಸೆ ಪಡೆಯುತ್ತಿರುವವರು 61. ಮೃತಪಟ್ಟವರು 7. ಗುಣಮುಖರಾಗಿ ಮನೆಗೆ ತೆರಳಿದವರು 69 ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಂಗಳವಾರ ಸಂಜೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವಿಷ್ಟು ಜಿಲ್ಲೆಯ ಮಾಹಿತಿಯಾದರೆ, ರಾಜ್ಯದ ಸ್ಥಿತಿ ಹೀಗಿದೆ.

ಕರ್ನಾಟಕದಲ್ಲಿ ಇಂದು 388 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3796ಕ್ಕೆ ಏರಿಕೆಯಾಗಿದೆ. ಇಂದು ಉಡುಪಿಯಲ್ಲಿ 150, ಕಲಬುರ್ಗಿ  100, ಬೆಳಗಾವಿ 51 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂದು 75 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 1403 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೆ, 388 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳು 2339. ಮೃತಪಟ್ಟವರು 52. ಖಚಿತ ಪ್ರಕರಣಗಳ ಸಂಖ್ಯೆ 3796 ಆಗಿದೆ. ಇಂದು ಕೂಡ ಗೊತ್ತಾದ 388 ಪ್ರಕರಣಗಳಲ್ಲಿ 367 ಅಂತಾರಾಜ್ಯ ಪ್ರಯಾಣಿಕರಿಗೆ ಬಂದಿದೆ.

ಉಡುಪಿಗೆ ಅಗ್ರಸ್ಥಾನ:

ಇಡೀ ರಾಜ್ಯದಲ್ಲೀಗ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು. ಒಟ್ಟು 410 ಪ್ರಕರಣಗಳು ಉಡುಪಿಯಲ್ಲಿದ್ದು, ಅವರ ಪೈಕಿ 346 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿಯೂ ಉಡುಪಿ ಅಗ್ರಪಟ್ಟದಲ್ಲಿರುವುದು ಆತಂಕಕಾರಿ. ದಕ್ಷಿಣ ಕನ್ನಡ ಜಿಲ್ಲೆ 12ನೇ ಸ್ಥಾನದಲ್ಲಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗುಡ್ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*