ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿಯ ಮಂಗಳೂರು ವಿಭಾಗ ಮಟ್ಟದ ಸಭೆ ಬಂಟ್ವಾಳದ ತುಂಬೆ ಬಂಟರ ಭವನದಲ್ಲಿ ಗುರುವಾರ ನಡೆಯಿತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಸಂಬಂಧಿಸಿದ ಶಾಸಕರು, ವಿಭಾಗ ಪ್ರಮುಖರು, ಜಿಲ್ಲಾಧ್ಯಕ್ಷರು, ಮಂಡಲಾಧ್ಯಕ್ಷರು, ಪ್ರಮುಖರು ಉಪಸ್ಥಿತರಿದ್ದರು.