ಬಂಟ್ವಾಳ

ಕಾವಳಕಟ್ಟೆಯಲ್ಲಿ ಕಂಡಿತು ಅಚ್ಚ ಶ್ವೇತವರ್ಣದ ಹೆಬ್ಬಾವು!!

ಮಳೆಗಾಲದಲ್ಲಿ ಹೆಬ್ಬಾವುಗಳು ಮನೆಯೊಳಗೆ ಬರುವುದು ಹಳ್ಳಿ ಪ್ರದೇಶದಲ್ಲಿ ಸಾಮಾನ್ಯ. ಗುರುವಾರ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಮನೆಯೊಂದಕ್ಕೆ ಪ್ರವೇಶಿಸಿದ ಬಿಳಿ ಬಣ್ಣದ ಹೆಬ್ಬಾವು ಹೀಗಿತ್ತು. 

ಜಾಹೀರಾತು

ಬಂಟ್ವಾಳ ತಾಲೂಕಿನ ಮನೆಯೊಂದಕ್ಕೆ ಗುರುವಾರ ಬಂದ ಹೆಬ್ಬಾವಿನ ಬಣ್ಣ ಬಿಳಿ. ಗುರುವಾರ ಕಾವಳಕಟ್ಟೆ ಎಂಬಲ್ಲಿ ನೌಶಾದ್ ಎಂಬವರ ಮನೆಯೊಂದಕ್ಕೆ ಬಿಳಿ ಬಣ್ಣದ ಹೆಬ್ಬಾವು ನುಗ್ಗಿತು. ಗಲಿಬಿಲಿಗೊಂಡ ಮನೆಯವರು ಕೂಡಲೇ ಅವರ ಸ್ನೇಹಿತ ಆಶೀಫ್ ಅವರಿಗೆ ಕರೆ ಮಾಡಿದಾಗ ಅವರು ಉರಗತಜ್ಞ ಸ್ನೇಕ್ ಕಿರಣ್ ಅವರನ್ನು ಸಂಪರ್ಕಿಸಿದರು. ಕೂಡಲೇ ಆಗಮಿಸಿದ ಸ್ನೇಕ್ ಕಿರಣ್ ಸ್ನೇಹಿತರಾದ ನಿತ್ಯಪ್ರಕಾಶ್ ಬಂಟ್ವಾಳ, ಶ್ರೀಪ್ರಸಾದ್ ಜೊತೆ ಅದನ್ನು ಹಿಡಿದು ವಲಯಾರಣ್ಯಾಧಿಕಾರಿ ಶ್ರೀಧರ್ ಅವರಿಗೆ ನೀಡಿದ್ದು, ಅದನ್ನು ಬಳಿಕ ಸುರಕ್ಷಿತವಾಗಿ ಮಂಗಳೂರು ಪಿಲಿಕುಳ ನಿಸರ್ಗಧಾಮಕ್ಕೆ ಬಿಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ