ಪ್ರಮುಖ ಸುದ್ದಿಗಳು

ಕೊರೊನಾ ಮಹಾಸ್ಫೋಟ, ಒಂದೇ ದಿನ ರಾಜ್ಯದಲ್ಲಿ 515 ಕೇಸ್

ಜಾಹೀರಾತು

ರಾಜ್ಯದಲ್ಲಿ ಇಂದು ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ ಸಿಂಹಪಾಲು ಉಡುಪಿಯದ್ದಾಗಿದೆ. ಒಟ್ಟು 515 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳ ಪೈಕಿ 482 ಕೇಸ್ ಗಳು ಅಂತಾರಾಜ್ಯ ಪ್ರಯಾಣಿಕರದ್ದು. ಇವುಗಳ ಪೈಕಿ ಉಡುಪಿಯದ್ದೇ ಜಾಸ್ತಿ.

ಉಡುಪಿ ಜಿಲ್ಲೆ ಮತ್ತೊಮ್ಮೆ ಕೊರೊನಾ ಸೋಂಕಿತರ ಪ್ರಕರಣ ಸಂಖ್ಯೆಯಲ್ಲಿ ಅಗ್ರಪಟ್ಟದಲ್ಲಿದೆ. ಅದರಲ್ಲೂ ಶುಕ್ರವಾರ ಒಂದೇ ದಿನ 204 ಮಂದಿಗೆ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 768ಕ್ಕೇರಿದಂತಾಗಿದೆ. ಅವುಗಳಲ್ಲಿ 82 ಮಂದಿಯಷ್ಟೇ ಬಿಡುಗಡೆ ಹೊಂದಿದ್ದು, ಒಟ್ಟು 685 ಮಂದಿ ಒಂದೇ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಹೊರರಾಜ್ಯಗಳಿಂದ ಬಂದವರು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಇಂದು 8 ಮಂದಿಗೆ ಕೊರೊನಾ ಪಾಸಿಟಿವ್ ಗೊತ್ತಾಗಿದ್ದು, ಹೆಚ್ಚಿನವರು ಹೊರರಾಜ್ಯಗಳಿಂದ ಬಂದವರು.

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4835ಕ್ಕೇರಿದೆ. ಸೋಂಕಿನ ಸಂಖ್ಯೆ ಹೀಗೆಯೇ ಮುಂದುವರಿದರೆ ನಾಳೆಯೇ 5 ಸಾವಿರ ಗಡಿ ತಲುಪಿದರೂ ಅಚ್ಚರಿ ಇಲ್ಲ. ಒಟ್ಟು ಸಕ್ರಿಯ ಪ್ರಕರಣಗಳು 3088 ಆಗಿದ್ದು, 1688 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇವಿಷ್ಟು ಈಗಿನ ಮಾಹಿತಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ