ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಂಟ್ವಾಳ ಮತ್ತು ಬಿಸಿರೋಡ್ ಪರಿಸರದಲ್ಲಿ ಸುಮಾರು 50ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಈ ಸಂದರ್ಭ ಅಭಾವಿಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಂಚಾಲಕ ಹರ್ಷಿತ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್,ದಿನೇಶ್ ಕೊಯಿಲ, ನಾಗರಾಜ್, ನಿಶ್ಚಿತ್ ಬಂಟ್ವಾಳ್, ಪ್ರತೀಕ್, ಕಾರ್ತಿಕ್, ಪ್ರಶಾಂತ್ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.