ಪ್ರಮುಖ ಸುದ್ದಿಗಳು

ರಾಜ್ಯದಲ್ಲಿ 5 ಸಾವಿರ ದಾಟಿದ ಕೊರೊನಾ ಸೋಂಕಿತರು, ಇಂದು 378 ಮಂದಿಗೆ ಪಾಸಿಟಿವ್

  • ಉಡುಪಿ ಜಿಲ್ಲೆಯಲ್ಲಿ 121, ದಕ್ಷಿಣ ಕನ್ನಡದಲ್ಲಿ 24 ಪ್ರಕರಣ ಪತ್ತೆ

ರಾಜ್ಯದಲ್ಲಿ ಒಟ್ಟು 378 ಮಂದಿಗೆ ಕೊರೊನಾ ವೈರಾಣುವಿನ ಸೋಂಕು ಶನಿವಾರ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿದೆ. ಇವುಗಳ ಪೈಕಿ ಒಟ್ಟು 280 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, ಬಿಡುಗಡೆ ಹೊಂದಿದವರ ಸಂಖ್ಯೆ 1968 ಆಗಿದೆ.

ಜಾಹೀರಾತು

ಅಂದರೆ ಇಡೀ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3184 ಆಗಿದೆ. ಕೋವಿಡ್ ಸೋಂಕಿನಿಂದ ಇಂದು 2 ಮಂದಿ ಸಾವನ್ನಪ್ಪಿದ್ದಾರೆ. ಇಂದಿನವರೆಗೆ ಒಟ್ಟು 59 ಮಂದಿ ಸಾವನ್ನಪ್ಪಿದ್ದು, 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ 333 ಮಂದಿ ಅಂತಾರಾಜ್ಯ, 8 ಹೊರದೇಶಗಳ ಪ್ರಯಾಣಿಕರಾಗಿದ್ದಾರೆ. ಉಡುಪಿಯಲ್ಲಿ ಒಟ್ಟು 889 ಪ್ರಕರಣ: ಉಡುಪಿ ಜಿಲ್ಲೆಯೊಂದರಲ್ಲೇ ಒಟ್ಟು 889 ಪ್ರಕರಣಗಳು ಪತ್ತೆಯಾಗಿದ್ದು, ಇಂದು 121 ದಾಖಲಾಗಿದೆ. ಇಂದು 21 ಮಂದಿ ಉಡುಪಿಯಲ್ಲಿ ಬಿಡುಗಡೆ ಹೊಂದಿದ್ದರೆ, ಒಟ್ಟು 103 ಮಂದಿ ಬಿಡುಗಡೆಯಾದಂತಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳು ಉಡುಪಿಯಲ್ಲಿ 785 ಇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 24 ಪ್ರಕರಣಗಳು ದಾಖಲಾಗಿವೆ. 15 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 72 ಮಂದಿ ದ.ಕ.ಜಿಲ್ಲೆಯಲ್ಲಿ ಗುಣಮುಖರಾದರೆ, 88 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ಒಟ್ಟು ಪ್ರಕರಣಗಳು 167 ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ದಕ್ಷಿಣ ಕನ್ನಡದ ಸಂಕ್ಷಿಪ್ತ ವಿವರ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 24 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇವರಲ್ಲಿ 5 ಕೇಸ್ ಗೆ ಸೋಂಕಿನ‌ ಮೂಲ ಪತ್ತೆಯಾಗಿಲ್ಲ. ಮಹಾರಾಷ್ಟ್ರದಿಂದ ಬಂದ 11 ಜನರಿಗೆ ಸೋಂಕು ತಗಲಿದರೆ, ದುಬೈನಿಂದ ಬಂದ 6 ಜನರಿಗೆ ಸೋಂಕು ತಗಲಿದೆ. ಟರ್ಕಿಯಿಂದ ಬಂದ ಒಬ್ಬರಿಗೆ, ಸೌದಿ ಅರೇಬಿಯಾದಿಂದ ಬಂದ ಒಬ್ಬರಿಗೆ ಸೋಂಕು ತಗಲಿದೆ. ಇಂದು 17 ಪುರುಷರು,6 ಮಹಿಳೆಯರಿಗೆ ಮತ್ತು ಓರ್ವ ಬಾಲಕಿಗೆ ಸೋಂಕು ಪತ್ತೆಯಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.