ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ 94ಸಿ ಹಕ್ಕುಪತ್ರ ಸಾಮರ್ಥ್ಯಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭ ಜಿ.ಪಂ ಸದಸ್ಯರಾದ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ ಸದಸ್ಯರಾದ ಗೀತಾ ಚಂದ್ರಶೇಖರ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಮಹಾಬಲ ಆಳ್ವ, ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಪ್ರಥಮ ದರ್ಜೆ ಸಹಾಯಕ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.