ಕಲ್ಲಡ್ಕ

ತಮ್ಮದೇ ಮನೆಗೆ ಮರಳುತ್ತಿರುವವರನ್ನು ಅಸ್ಪೃಶ್ಯರಂತೆ ನೋಡುವುದು ಸರಿಯೇ?

www.bantwalnews.com Editor: Harish Mambady For Advertisements contact: 9448548127

ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಆಗಮಿಸುವ ನಮ್ಮವರ ನೋವಿಗೆ ಸ್ಪಂದಿಸುವುದು ಅಗತ್ಯ. ನೋವು ದುಃಖದಲ್ಲಿರುವ ನಮ್ಮವರೇ ಆಗಿರುವ ಹೊರರಾಜ್ಯದ ಬಂಧುಗಳ ಬಗ್ಗೆ ಕೆಟ್ಟದಾಗಿ ಮಾತನಾಡದಿರೋಣ. ಅವರ ಜೊತೆ ಕೀಳಾಗಿ ವರ್ತಿಸದಿರೋಣ. ಈ ಜಿಲ್ಲೆಯ ಜನರು ಸಹೃದಯಿಗಳು, ಕಷ್ಟಕ್ಕೆ ಸ್ಪಂದಿಸುವವರು, ಬುದ್ಧಿವಂತರು ಎಂಬುದನ್ನು ತೋರಿಸಲು ದೇವರೇ ಕೊಟ್ಟ ಅವಕಾಶವೆಂದು ಭಾವಿಸೋಣ ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಜಾಹೀರಾತು

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಪ್ರದೇಶಕ್ಕೆ ಎಲ್ಲ ರಾಜ್ಯಗಳಿಂದಲೂ ಜನ ಪ್ರವಾಹದೋಪಾದಿಯಂತೆ ಬರುತ್ತಿದ್ದಾರೆ. ಈ ಲಕ್ಷಾಂತರ ಜನ (ಮಹಾರಾಷ್ಟ್ರವೂ ಸೇರಿ) ಬಂದಾಗಲೆಲ್ಲಾ ಉತ್ತರ ಪ್ರದೇಶದಲ್ಲಿ ಸಂತೋಷದಿಂದ ತನ್ನೆರಡೂ ಕೈಗಳಿಂದ ಅವರನ್ನು ಸ್ವಾಗತಿಸುತ್ತಿದ್ದಾರೆ. ಆದರೆ ನಾವು ಅಲ್ಲಿಂದ ಬರುವವರನ್ನು ಸಂಶಯದಿಂದ ಯಾಕೆ ನೋಡುತ್ತೇವೆ ಎಂದು ಪ್ರಶ್ನಿಸಿದ್ದಾರೆ.

ಜಾಹೀರಾತು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಬುದ್ಧಿವಂತರ, ಸಹೃದಯಿ, ಕಷ್ಟಕ್ಕೆ ಸ್ಪಂದಿಸುವ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ರಾಜಕೀಯವಾಗಿ ಪ್ರಸಿದ್ಧಿ ಪಡೆದಿರುವ ಜಿಲ್ಲೆ. ಕಳೆದ 3 ತಿಂಗಳಿಂದ ನಮ್ಮ ಜನರು ದೇಶ-ವಿದೇಶಗಳಲ್ಲಿ ಸಿಲುಕಿ ತೊಂದರೆಗೆ ಒಳಗಾಗಿದ್ದಾರೆ. ಕೆಲವು ಜನ ಕೆಲಸ ಕಳೆದುಕೊಂಡು, ಇನ್ನು ಕೆಲವರು ಕೊರೋನ ವ್ಯಾಪಿಸುತ್ತಿರುವಾಗ ನಮ್ಮ ಊರಲ್ಲಿ ಹೆಚ್ಚಿನ ರಕ್ಷಣೆ ಸಿಗಬಹುದೆಂಬ ಆಶಯದಿಂದ ತಮ್ಮ ಮನೆಗೆ ಮರಳಿದ್ದಾರೆ. ಇನ್ನಷ್ಟು ಜನರು ಬರಲು ತಯಾರಿ ನಡೆಸುತ್ತಿದ್ದಾರೆ. ಕಳೆದ 3 ತಿಂಗಳಿಂದ ಕೆಲಸವಿಲ್ಲದೆ ಕೈಯಲ್ಲಿ ಇದ್ದ ಹಣವನ್ನು ಕಳೆದುಕೊಂಡು ಸಮಸ್ಯೆಯಲ್ಲಿದ್ದಾರೆ. ಮುಂಬೈಯಲ್ಲಿನ ವ್ಯವಸ್ಥೆ ಮತ್ತೆ ಸಹಜತೆಗೆ ಮರಳಲು ತುಂಬಾ ಸಮಯ ಹಿಡಿಯಬಹುದು. ಈ ಸಂದರ್ಭದಲ್ಲಿ ಅವರ ಮನಸ್ಥಿತಿ  ಹೇಗಿರಬಹುದು ಊರಿಗೆ ಬರುತ್ತಿರುವ ಆ ನಮ್ಮ ಬಂಧುಗಳನ್ನು ಬರುವುದು ಬೇಡ ಅನ್ನುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ತಮ್ಮ ಮನೆಗೆ ಮರಳುತ್ತಿರುವವರನ್ನು ಅಸ್ಪೃಶ್ಯ ಭಾವದಿಂದ ನೋಡುವುದು ಸರಿಯಲ್ಲ. ಮುಂಬೈಗೆ ಹೋಗಿ ಅಲ್ಲಿ ಆ ಮಹಾವಾಣಿಜ್ಯ ನಗರದಲ್ಲಿ ಅಥವಾ ಇಡೀ ಮಹಾರಾಷ್ಟ್ರದಲ್ಲಿ ಸಾಮಾಜಿಕ, ಧಾರ್ಮಿಕ, ರಾಜಕೀಯ, ಶೈಕ್ಷಣಿಕ, ವೈದ್ಯಕೀಯ, ಚಲನಚಿತ್ರ ರಂಗದಲ್ಲಿ ಅವರು ರಾರಾಜಿಸಿ ನಮ್ಮ ಜಿಲ್ಲೆಗೂ ಗೌರವ ತಂದಿತ್ತಿದ್ದಾರೆ. ಇಲ್ಲಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ನಮ್ಮ ಉಭಯ ಜಿಲ್ಲೆಗಳ ಎಲ್ಲಾ ಕ್ಷೇತ್ರಗಳ ಚಟುವಟಿಕೆಗೆ ಎಲ್ಲಾ ರೀತಿಯ ಬೆಂಬಲವನ್ನು ನೀಡಿದವರು ಅವರೇ. ಜಿಲ್ಲೆಯಲ್ಲಿ ನಡೆಯುವ ಬ್ರಹ್ಮಕಲಶ, ಜೀರ್ಣೋದ್ಧಾರ, ಗುಡಿ, ಗೋಪುರಗಳ ಕಾರ್ಯಗಳಿಗಾಗಿ ಪ್ರತಿ ವರ್ಷ ನೂರಾರು ಕೋಟಿ ಅವರು ದುಡಿದ ಹಣವನ್ನು ನೀಡಿದ್ದಾರೆ.  ಇದರಿಂದ ಇಲ್ಲಿಯ ನಮ್ಮ ಎಲ್ಲ ರೀತಿಯ ಜನಜೀವನ ಚೆನ್ನಾಗಿ ನಡೆದುಕೊಂಡು ಬಂದಿದೆ. ಬಹಳಷ್ಟು ಉದ್ಯೋಗ ಸೃಷ್ಟಿಯಾಗಿದೆ ಇದರಿಂದ ನಮ್ಮ ಕುಟುಂಬಗಳೂ ಸಶಕ್ತವಾಗಿದೆ ಎಂದು ಭಟ್ ನೆನಪಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ