ಜಾಹೀರಾತು
ಬಂಟ್ವಾಳ ತಾಲೂಕಿನಾದ್ಯಂತ ಬುಧವಾರ ದಿನವಿಡೀ ಆಗಾಗ್ಗೆ ಗಾಳಿ, ಮಳೆ ಗುಡುಗು ಸಿಡಿಲಿನೊಂದಿಗೆ ಸುರಿಯುತ್ತಿದ್ದು, ವಾತಾವರಣ ಕೂಲ್ ಆಗಿದೆ. ಇದೇ ವೇಳೆ ಸರಪಾಡಿ ಬೀಯಪಾದೆಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ನ ಮೂರು ಕಂಬಗಳು ಧರೆಗುರುಳಿದವು. ನೀರಿನ ಯೋಜನೆಗೆ ಪ್ರತ್ಯೇಕ ವಿದ್ಯುತ್ ಲೈನ್ನ ಕಾಮಗಾರಿ ನಡೆಯುತ್ತಿದ್ದು, ಹೊಸದಾಗಿ ಅಳವಡಿಸಿದ ಕಂಬಗಳು ಮಳೆಗೆ ಧರೆಗುರುಳಿವೆ. ಘಟನೆಯಿಂದ ಸಾಮಾನ್ಯ ವಿದ್ಯುತ್ ಪೂರೈಕೆ ಸೇರಿದಂತೆ ಇತರ ಯಾವುದಕ್ಕೂ ಕೂಡ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಾಳಿ ಮಳೆ, ಧರೆಗುರುಳಿದ ಕಂಬಗಳು"