ಕಲ್ಲಡ್ಕ

ಮಾಣಿ ಬಳಿ ಯುವಕನ ಮೃತದೇಹ ಪತ್ತೆ

 

ಜಾಹೀರಾತು

ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಮಾಣಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಮಾಣಿ ಸಮೀಪ ಪಳಿಕೆ ಎಂಬಲ್ಲಿ ಮರದ ಬುಡವೊಂದರಲ್ಲಿ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಮರಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ಇದನ್ನು ಗಮನಿಸಿ ವಿಟ್ಲ ಠಾಣಾ ಪೊಲೀಸರ ಗಮನಕ್ಕೆ ತಂದಿದ್ದು, ಮೃತದೇಹವನ್ನು ಮಹಜರು ಮಾಡಲಾಯಿತು. ಮರದಲ್ಲಿ ಮೃತನ ಪ್ಯಾಂಟ್ ನೇತಾಡುತ್ತಿದ್ದುದು ಕಂಡುಬಂದಿದ್ದು, ಈತ ಪ್ಯಾಂಟನ್ನೇ ನೇಣಾಗಿ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದುವರೆಗೆ ಮೃತನ ಹೆಸರು, ವಿಳಾಸ ತಿಳಿದುಬಂದಿಲ್ಲ

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts