ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ಸುರೇಶ್ಕುಮಾರ್(42) ಅವರು ಮಾದಿಮೆತಿಮಾರ್ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ಅವರು ಜೂನ್ 10ರಂದು ಮಾಣಿಗೆ ತೆರಳಿ ಔಷಧ ಪಡೆದು ಸಂಜೆಯ ಬಳಿಕ ಕಾಣೆಯಾಗಿದ್ದರು. ಮರುದಿನ ಬೆಳಗ್ಗೆ ಮಾದಿಮೆತಿಮಾರ್ ಗುಡ್ಡದಲ್ಲಿ ಅವರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರ ಪುತ್ರ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)