ಬಂಟ್ವಾಳ

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕವಾದ ಕೆ. ಹರಿಕೃಷ್ಣ ಬಂಟ್ವಾಳ ಶನಿವಾರ ಮಧ್ಯಾಹ್ನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು ಅಭಿನಂದಿಸಲಾಯಿತು.

ಜಾಹೀರಾತು

 

ಶಾಸಕ ರಾಜೇಶ್ ನಾಯ್ಕ್ಅವರು ಹಾರ ಹಾಕಿ ಶಾಲು ಹೊದೆಸುವ ಮೂಲಕ ಹರಿಕೃಷ್ಣ ಬಂಟ್ವಾಳರವರನ್ನು ಅಭಿನಂದಿಸಿದರು. ಹಿರಿಯ ರಾಜಕಾರಿಣಿಯಾಗಿದ್ದು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿ ಪ್ರಸ್ತುತ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದು ಅತೀವ ಸಂತೋಷವಾಗಿದೆ. ಇವರು ಇನ್ನಷ್ಟು ಅಭಿವೃದ್ಧಿಯ ಕೆಲಸವನ್ನು ವಿದ್ಯುನ್ಮಾನ ನಿಗಮದಲ್ಲಿ ಮಾಡಲಿ ಎಂದು ಶುಭ ಹಾರೈಸುತ್ತೇನೆ. ಇವರ ನೇಮಕಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಸಂಧರ್ಭ ಬೂಡ ಅದ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರಮುಖರರಾದ ಸೀತಾರಾಮ ಪೂಜಾರಿ, ರಮನಾಥ ರಾಯಿ, ಮನೋಜ್ ಕಳ್ಳಿಗೆ, ಪುಷ್ಪರಾಜ್ ಚೌಟ, ಶ್ರೀಕಾಂತ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ನಗ್ರಿ, ಪುರುಷೋತ್ತಮ, ನಿತ್ಯಪ್ರಕಾಶ್ ಬಂಟ್ವಾಳ ಮತ್ತಿತರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.