ಕಲ್ಲಡ್ಕ

352 ಆಶಾ ಕಾರ್ಯಕರ್ತೆಯರಿಗೆ ಕೆಎಂಎಫ್ ನಿಂದ ಕಿಟ್ ವಿತರಣೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಬಂಟ್ವಾಳ ತಾಲೂಕಿನ 352 ಆಶಾ ಕಾರ್ಯಕರ್ತೆಯರಿಗೆ ನಂದಿನಿ ಉತ್ಪನ್ನಗಳ ಕಿಟ್ ಅನ್ನು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದಲ್ಲಿ ವಿತರಿಸಲಾಯಿತು.

ಜಾಹೀರಾತು

 

ಅಧ್ಯಕ್ಷತೆಯನ್ನು ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟದ ನಿರ್ದೇಶಕ ಬಿ.ಸುಧಾಕರ ರೈ ಬೋಳಂತೂರು, ಸವಿತಾ ಎನ್ ಶೆಟ್ಟಿ ಭಾಗವಹಿಸಿದ್ದರು. ದ.ಕ.ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಎಸ್ ಪ್ರಭಾಕರ್, ವಿಸ್ತರಣಾಧಿಕಾರಿಗಳಾದ ದೇವರಾಜ್ ಎಸ್.ಎನ್, ಜಗದೀಶ ಎ, ಸರೋಜಿನಿ, ಮಾರುಕಟ್ಟೆ ಅಧೀಕ್ಷರಾದ ರವಿ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಭಾಗವಹಿಸಿದ್ದರು. ದ.ಕ.ಹಾಲು ಒಕ್ಕೂಟದ ನಿರ್ದೇಶಕ ಬಿ.ಸುಧಾಕರ ರೈ ಬೋಳಂತೂರು ಸ್ವಾಗತಿಸಿದರು. ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.