ಮಾಸ್ಕ್ ದಿನವನ್ನು ಆಚರಿಸುವ ಮೂಲಕ ಜನಜಾಗೃತಿ ಮೂಡಿಸಲು ಬಂಟ್ವಾಳ ತಾಲೂಕಾಡಳಿತ ಚುನಾಯಿತ ಜನಪ್ರತಿನಿಧಿಗಳು, ವೈದ್ಯಕೀಯ ಸಿಬ್ಬಂದಿ ಜೊತೆಗೂಡಿ ಜನಜಾಗೃತಿಗಾಗಿ ಪಾದಯಾತ್ರೆಯನ್ನು ಜೂನ್ 18ರಂದು ನಡೆಸಲಿದೆ. ಬೆಳಗ್ಗೆ 11ಕ್ಕೆ ಬಂಟ್ವಾಳ ನಾರಾಯಣಗುರು ವೃತ್ತದಿಂದ ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದವರೆಗೆ ಜಾಥಾ ನಡೆಯಲಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ ಜಾಥಾ ನಡೆಯುತ್ತದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)