ಬಂಟ್ವಾಳ

ಬಂಟ್ವಾಳ: ಋಣಮುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಬಂಟ್ವಾಳ ಮಿನಿ ವಿಧಾನಸೌಧದ ಮುಂದೆ ಋಣಮುಕ್ತ ಹೋರಾಟ ಸಮಿತಿಯಿಂದ ನಾನಾ ಬೇಡಿಕೆ ಈಡೇರಿಕೆ ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಜಾಹೀರಾತು

ಬಳಿಕ ತಹಸೀಲ್ದಾರ್ ರಶ್ಮಿ ಎಸ್.ಆರ್. ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಋಣಮುಕ್ತ ಹೋರಾಟ ಸಮಿತಿ ಅಧ್ಯಕ್ಷ ಬಿ.ಎಂ.ಭಟ್, ಬಡ ಮಹಿಳೆಯರ ಮೈಕ್ರೋ ಫೈನಾನ್ಸ್ ಸಾಲಗಳ ಮನ್ನಾ ಹಾಗೂ ಕೊರೊನಾ ಸಂತ್ರಸ್ತ ಬಡವರಿಗೆ ನಗದು ಪರಿಹಾರ, ರೇಷನ್ ಒದಗಿಸಬೇಕು ಎಂದು ಒತ್ತಾಯಿಸಿದರು. ದ.ಕ. ಜಿಲ್ಲಾಋಣಮುಕ್ತ ಹೋರಾಟ ಸಮಿತಿಯ ಸಂಚಾಲಕರಾದ ಸಿಐಟಿಯು ಮುಖಂಡ ಎಲ್ ಮಂಜುನಾಥ್ ಮಾತನಾಡಿ, ಸರ್ಕಾರದ ನೀತಿಗಳನ್ನು ಟೀಕಿಸಿದರು. ತಾಲೂಕು ಕಾರ್ಯದರ್ಶಿಪ್ರಮೀಳಾ ಸ್ವಾಗತಿಸಿದರು. ಅದ್ಯಕ್ಷರಾದ ನಾಗರಾಜ್ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಯೋಗಿತಾ, ಜಯರಾಮ ಮಯ್ಯ, ರಾಮಚಂದ್ರ, ಯುವರಾಜ, ಋಣಮುಕ್ತ ಸಂಘಟನೆಯ ಪ್ರಿಯದರ್ಶಿನಿ, ಚಿತ್ರಾಕ್ಷಿ,  ಭವ್ಯ ಬೆಳ್ತಂಗಡಿ, ಗಣೇಶ ಪ್ರಸಾದ್ ಮೊದಲಾದವರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ