ಜಿಲ್ಲಾ ಸುದ್ದಿ

DAKSHINA KANNADA: ಒಂದೇ ದಿನ 97 ಮಂದಿಗೆ ಕೊರೊನಾ ಸೋಂಕು, 3 ಸಾವು

ಕೊರೊನಾ ಪ್ರಕರಣಗಳು ಪತ್ತೆಯಾಗಲಾರಂಭಿಸಿದ ನಂತರದ ದೊಡ್ಡ ಆಘಾತ ದಕ್ಷಿಣ ಕನ್ನಡ ಜಿಲ್ಲೆಗೆ ಇವತ್ತು ಆಗಿದೆ. ಇಂದು ಒಂದೇ ದಿನ 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 3 ಮಂದಿ ಸಾವನ್ನಪ್ಪಿದ್ದಾರೆ. ಮಂಗಳೂರು ತಾಲೂಕು ನಿವಾಸಿ ಪುರುಷ ಮತ್ತು ಮಹಿಳೆ ಮತ್ತು ಬಂಟ್ವಾಳ ತಾಲೂಕಿನ ಮಹಿಳೆ ಸಾವನ್ನಪ್ಪಿದವರು.

ಜಾಹೀರಾತು

ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ. ಇಂದು 6 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು 377 ಮಂದಿಯ ಗಂಟಲು ದ್ರವ ಮಾದರಿ ಕಳುಹಿಸಲಾಗಿದೆ. ಒಟ್ಟು 480 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಲು ಬಾಕಿ ಇದೆ. ಇಂದು ಗೊತ್ತಾದ 178 ಪರೀಕ್ಷಾ ವರದಿಗಳಲ್ಲಿ 97 ಪಾಸಿಟಿವ್, 81 ನೆಗೆಟಿವ್ ಬಂದಿದೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 673 ಮಂದಿಗೆ ಕೊರೊನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಇವರಲ್ಲಿ 10 ಅನ್ಯರಾಜ್ಯ, ಜಿಲ್ಲೆಯವರಾಗಿದ್ದು, ಜಿಲ್ಲೆಯವರದ್ದೇ ಆದ 663 ಕೇಸ್ ಗಳಿವೆ. 13 ಮಂದಿ ಸಾವನ್ನಪ್ಪಿದ್ದರೆ, 422 ಮಂದಿ ಗುಣಮುಖರಾಗಿದ್ದಾರೆ. 238 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ