ಬಂಟ್ವಾಳ

ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಸದಸ್ಯರ ಶ್ರಮದಾನದಿಂದ ನಿರ್ಮಿಸಿದ ಮನೆ ಗೃಹಪ್ರವೇಶ

ಜಾಹೀರಾತು

ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಸದಸ್ಯರ ನಿರಂತರ ಶ್ರಮದಾನದ ಮೂಲಕ ನಿರ್ಮಾಣಗೊಂಡ ಸಜೀಪಮೂಡ ಗ್ರಾಮದ ಕಂದೂರಿನ ಬಡಮಹಿಳೆ ಕಮಲ ಅವರ ಮನೆಯ ಗೃಹಪ್ರವೇಶ ಭಾನುವಾರ ನಡೆಯಿತು.

ಸಜೀಪಮೂಡ ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಬೆಳ್ಚಾಡ ಕುಂಭ ಕುಟೀರ ಶಿಲಾಫಲಕ ಅನಾರಣಗೊಳಿಸುವ ಮೂಲಕ ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಉದ್ಘಾಟಿಸಿದರು. ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೃಹಪ್ರವೇಶ ಸಮಾರಂಭ ನಡೆಯಿತು. ಬಳಿಕ ಮನೆಯ ಕೀಲಿ ಕೈ ನೀಡುವ ಮೂಲಕ ಯುವವೇದಿಕೆಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಮನೆಯನ್ನು ಕಮಲಾ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು.

ಕಂದೂರಿನಲ್ಲಿ ಸ್ವಂತ ಜಮೀನು ಹಾಗೂ ಮನೆ ಇದ್ದರೂ ಕೂಡ ಕಮಲ ಅವರು ಕಾರಣಂತರಗಳಿಂದ ಮಣಿನಾಲ್ಕೂರು ಗ್ರಾಮದ ಕುಂಟಾಲಪಲ್ಕೆಯಲ್ಲಿ ಬಾಡಿಗೆ ಮನೆಯಲ್ಲಿ ತನ್ನಿಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಯುವಕರು ಕುಲಾಲ ಕುಂಬಾರ ಯುವ ವೇದಿಕೆಯ ಗಮನಕ್ಕೆ ತಂದಾಗ ಮನೆಮಂದಿಯನ್ನು ಸಂಪರ್ಕಿಸಿ ಅವರ ಒಪ್ಪಿಗೆ ಪಡೆದು ಕಂದೂರಿನ ಮನೆಯ ಪುನರ್ ನಿರ್ಮಾಣ ಕಾರ್ಯವನ್ನು ಆರಂಭಿಸಲಾಯಿತು. ಕರೋನಾ ಲಾಕ್‌ಡೌನ್‌ನ ಬಿಡುವಿನ ವೇಳೆಯನ್ನು ಸದುಪಯೋಗ ಪಡಿಸಿಕೊಂಡ ಯುವ ವೇದಿಕೆಯ ಸದಸ್ಯರು ದಾನಿಗಳ ನೆರವಿನೊಂದಿಗೆ ಎಂಟು ದಿನಗಳ ಕಾಲ ಶ್ರಮದಾನ ನಡೆಸಿ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ