ಸರ್ಕಾರಿ ಕಚೇರಿ

ಅಗಸ, ಕ್ಷೌರಿಕ ವೃತ್ತಿಯ ಕಾರ್ಮಿಕರಿಗೆ ನೆರವು: ಅರ್ಜಿ ಸಲ್ಲಿಕೆಗೆ ಜುಲೈ 10 ಕೊನೇ ದಿನ

ಬಂಟ್ವಾಳ: ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯ ಕಾರ್ಮಿಕರಿಗೆ ರಾಜ್ಯ ಸರಕಾರ ಕೊಡುವ ಒಂದು ಬಾರಿಯ 5 ಸಾವಿರ ರೂಗಳ ನೆರವಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು, ಜುಲೈ 10 ಅರ್ಜಿ ಸಲ್ಲಿಕೆಗೆ ಕೊನೇ ದಿನ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಜಾಹೀರಾತು

ಸೌಲಭ್ಯ ಪಡೆಯಲು ಫಲಾನುಭವಿ ಕಡ್ಡಾಯವಾಗಿ ಕ್ಷೌರಿಕ ಅಥವಾ ಅಗಸ ವೃತ್ತಿಯಲ್ಲಿ ತೊಡಗಿರಬೇಕು, 18ರಿಂದ 65 ವರ್ಷಗಳವರಾಗಿರಬೇಕು, ಬಿಪಿಎಲ್ ಕುಟುಂಬಗಳಿಗಷ್ಟೇ ಇದು ಅನ್ವಯ,ಒಂದು ಕುಟುಂಬದಲ್ಲಿ ಒಬ್ಬರಿಗಷ್ಟೇ ಅವಕಾಶ, ಕರ್ನಾಟಕದಲ್ಲಿ ರಾಜ್ಯದ ಬಿಪಿಎಲ್ ಹೊಂದಿದ ಹೊರರಾಜ್ಯದ ಕಾರ್ಮಿಕರೂ ಅರ್ಹರು, ಸೇವಾ ಸಿಂದು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಉದ್ಯೋಗ ದೃಢೀಕರಣ ಪತ್ರವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಪಡೆದು ಅಪ್ಲೋಡ್ ಮಾಡಬೇಕು, ಮೊಬೈಲ್ ಸಂಖ್ಯೆ ಹೊಂದಿರಬೇಕು, ಬ್ಯೂಟಿಷಿಯನ್ ಅಥವಾ ಇತರೆ ಕೆಲಸ ಇದ್ದರೆ ಅರ್ಹರಲ್ಲ ಎಂದು ಕಾರ್ಮಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಯೋಗ ದೃಢೀಕರಣ ಪತ್ರ ನೀಡುವ ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪುರಸಭೆ, ಪಪಂ, ಕಂದಾಯ ಅಧಿಕಾರಿ ಮತ್ತು ಕಂದಾಯ ನಿರೀಕ್ಷಕರು., ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಪಿಡಿಒಗಳು , ಗ್ರಾಪಂ ಕಾರ್ಯದರ್ಶಿಗಳು.

ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಉದ್ಯೋಗ ಧೃಢೀಕರಣ ಪತ್ರ, ಸ್ವಯಂಘೋಷಣೆ, ಜನ್ಮದಿನಾಂಕ ದಾಖಲೆ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಅಗತ್ಯ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಕೊನೇ ದಿನಾಂಕ ಜುಲೈ 10 . ಅರ್ಹ ಫಲಾನುಭವಿಗಳಿಗೆ ಆಧಾರ್ ಲಿಂಕ್ ಹೊಂದಿರುವ ಅವರವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts