ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡದಲ್ಲಿ ಮತ್ತೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ, ಇಂದು 84 ಹೊಸ ಕೇಸ್, 3 ಮಂದಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸ್ವೀಕೃತವಾದ ವರದಿಯಲ್ಲಿ 84 ಮಂದಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ 6 ಶಾರ್ಜಾ ಮತ್ತು 1 ಅಂತಾರಾಜ್ಯದಿಂದ ಆಗಮಿಸಿದವರಾಗಿದ್ದಾರೆ. 28 ಮಂದಿ ಐಎಲ್ ಐ, 11 ಮಂದಿಯ ಸೋಂಕಿನ ಮೂಲ ಗೊತ್ತಾಗಿಲ್ಲ. 38 ಮಂದಿ ಪ್ರೈಮರಿ ಸಂಪರ್ಕದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಇಂದು ಮೂವರು ದ.ಕ.ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಿವಾಸಿ 72 ವರ್ಷದ ಪುರುಷ, ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಪುರುಷ, ಹಾಗೂ 76 ವರ್ಷದ ವೃದ್ಧರು ಸಾವನ್ನಪ್ಪಿದ್ದಾರೆ. 57 ವರ್ಷದ ಮಹಿಳೆ ಸ್ಥಿತಿ ಗಂಭೀರವಾಗಿದೆ.

ಜಿಲ್ಲೆಯಲ್ಲಿ ಈವರೆಗೆ 13,873 ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 833 ಮಂದಿಗೆ ಪಾಸಿಟಿವ್ ಬಂದಿದೆ. ಇಂದು 84 ಹೊಸ ಕೇಸ್ ಬಂದಿವೆ. ಇದುವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಹೊರಬಂದ ರಿಪೋರ್ಟ್ ನಲ್ಲಿ 145 ಮಂದಿಯ ಸ್ಯಾಂಪಲ್ ವರದಿಗಳು ಬಂದಿದ್ದು, ಇದರಲ್ಲಿ ಪಾಸಿಟಿವ್ ಬಂದವರ ಸಂಖ್ಯೆ ಅಧಿಕವಾಗಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ