ಜಿಲ್ಲಾ ಸುದ್ದಿ

ದ.ಕ.ಜಿಲ್ಲೆ: 1000 ದಾಟಿದ ಸೋಂಕಿತರ ಸಂಖ್ಯೆ, ಇಂದು 97 ಹೊಸ ಕೇಸ್, 498 ಮಂದಿಗೆ ಚಿಕಿತ್ಸೆ, 503 ಡಿಸ್ಚಾರ್ಜ್

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 3 ಸೌದಿ, ದುಬಾಯಿನಿಂದ ಬಂದವರು. 28 ಐಎಲ್ ಐ, 25 ಪ್ರಾಥಮಿಕ ಸಂಪರ್ಕದವರಾಗಿದ್ದರೆ, ಉಳಿದವರಿಗೆ ಸೋಂಕು ಹೇಗೆ ಬಂತು ಎಂಬುದು ಇನ್ನೂ ಗೊತ್ತಾಗಿಲ್ಲ. ಇಂದು 26 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 3 ಮಂದಿ ಐಸಿಯುನಿಂದ ವಾರ್ಡ್ ಗೆ ಸ್ಥಳಾಂತರಗೊಂಡಿದ್ದಾರೆ. 5 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಮೂಲಕ 47 ವರ್ಷದ ಪುರುಷನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ.

ಇಂದು ಎಷ್ಟು ಪರೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದೊರಕಿದ ರಿಪೋರ್ಟುಗಳು 425. ಅವುಗಳಲ್ಲಿ 97 ಪಾಸಿಟಿವ್, 328 ನೆಗೆಟಿವ್. ಇನ್ನೂ 427 ಮಂದಿಯ ರಿಪೋರ್ಟ್ ಬರಲು ಬಾಕಿ ಇದೆ. ಒಟ್ಟು 280 ಮಂದಿಯ ಸ್ಯಾಂಪಲ್ ಗಳನ್ನು ಇಂದು ಲ್ಯಾಬ್ ಗೆ ಕಳಿಸಲಾಗಿದೆ.

ಜಾಹೀರಾತು

ಒಟ್ಟು 14,710 ಮಂದಿಯ ಗಂಟಲು ದ್ರವ ಮಾದರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಗ್ರಹಿಸಲಾಗಿದ್ದು, ಅವುಗಳ ಪೈಕಿ 14,428 ಮಂದಿಯ ರಿಪೋರ್ಟ್ ಬಂದಿದೆ. ಇವುಗಳ ಪೈಕಿ 1020 ಮಂದಿ ಪಾಸಿಟಿವ್ ಎಂದು ದೃಢಪಟ್ಟಿದ್ದು, ಅವುಗಳ ಪೈಕಿ 10 ಹೊರಜಿಲ್ಲೆ, ರಾಜ್ಯದವರು. ಇದೀಗ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 498. ಮೃತಪಟ್ಟವರು 19. ಬಿಡುಗಡೆ ಹೊಂದಿದವರು 503.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ