ಬಂಟ್ವಾಳದಲ್ಲಿ ಕಾರ್ಮಿಕ ಸಂಘಟನೆಗಳ ಹಕ್ಕೊತ್ತಾಯ ಪ್ರದರ್ಶನ

ಬಂಟ್ವಾಳ: ಲಾಕ್ ಡೌನ್ ಸಂದರ್ಭ ಕಾರ್ಮಿಕರಿಗೆ ಸಂಬಳ ಸಿಗದೆ ಕುಟುಂಬ ಉಪವಾಸ ಬಿದ್ದಿದ್ದು. ಸರ್ಕಾರದ ಪರಿಹಾರ ನಿರ್ದಿಷ್ಟ ಫಲಾನುಭವಿಗಳಿಗೆ ದೊರಕಿಲ್ಲ ಎಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಜೆಸಿಟಿಯು ಬಂಟ್ವಾಳ ತಾಲೂಕು ಸಮಿತಿ ಆಶ್ರಯದಲ್ಲಿ ಹಕ್ಕೊತ್ತಾಯ ಪ್ರದರ್ಶನ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಎದುರು ನಡೆಯಿತು.

ಜಾಹೀರಾತು

ಸಭೆಯನ್ನುದ್ದೇಶಿಸಿ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ಶೇಖರ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿದರು. ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಉಪಸ್ಥಿತರಿದ್ದರು. ಎಐಟಿಯುಸಿ ತಾಲೂಕು ಮುಖಂಡರಾದ ಬಿ.ಬಾಬು ಭಂಡಾರಿ, ಸರಸ್ವತಿ ಕಡೇಶ್ವಾಲ್ಯ, ಶಮಿತಾ, ಹರ್ಷಿತ್, ಸರೋಜಿನಿ ಕುರಿಯಾಳ ಹಾಗೂ ಸಿಐಟಿಯು ತಾಲೂಕು ಮುಖಂಡರಾದ ಲೋಲಾಕ್ಷಿ, ಟೂರಿಸ್ಟ್ ವಾಹಕ ಚಾಲಕರ ಸಂಘಟನೆ(ಸಿಐಟಿಯು) ಕಾರ್ಯದರ್ಶಿ ಗುಣಕರ್, ಭಾರತೀಯ ಮಹಿಳಾ ಒಕ್ಕೂಟ(ಎನ್ ಎಫ್ ಐ ಡಬ್ಯೂ) ಅಧ್ಯಕ್ಷೆ ಭಾರತಿ ಪ್ರಶಾಂತ್, ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್, ಯುವ ವಕೀಲ ತುಳಸೀದಾಸ್ ವಿಟ್ಲ,  ಡಿವೈಎಫ್ಐ ಜಿಲ್ಲಾ ಮುಖಂಡ ಮೊಹಮ್ಮದ್ ಇಕ್ಬಾಲ್ ಮುಂತಾದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 15 ಪ್ರಮುಖ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗೆ ಬಂಟ್ವಾಳ ತಹಶ್ಹೀಲ್ದಾರರ ಮುಖೇನ ಅರ್ಪಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಕಾರ್ಮಿಕ ಸಂಘಟನೆಗಳ ಹಕ್ಕೊತ್ತಾಯ ಪ್ರದರ್ಶನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*