ಬಂಟ್ವಾಳ

ಸಂಡೇ ಲಾಕ್ ಡೌನ್ ಸದುಪಯೋಗ: ಹೊಂಡ ಮುಚ್ಚಿ ಕಾಂಕ್ರೀಟ್ ಹಾಕಿದ ಬಿಜೆಪಿ ಕಾರ್ಯಕರ್ತರು

ಜಾಹೀರಾತು

ಜಾಹೀರಾತು

ಜಾಹೀರಾತು

ಭಾನುವಾರ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಿಜೆಪಿಯ ಬಿ.ಸಿ.ರೋಡಿನ ಕಾರ್ಯಕರ್ತರು ಬಿ.ಸಿ.ರೋಡಿನ ಪ್ರಮುಖ ಜಾಗಗಳಲ್ಲಿ ಇದ್ದ ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕ ಸದುಪಯೋಗಪಡಿಸಿದರು. ಬಿ.ಸಿ.ರೋಡಿನ ಹೆದ್ದಾರಿ, ಸರ್ವೀಸ್ ರಸ್ತೆಗಳಲ್ಲಿ ರಸ್ತೆ ಹದಗೆಟ್ಟಿದ್ದು, ಸುಗಮ ವಾಹನ ಸಂಚಾರಕ್ಕೆ ಅಡೆತಡೆಯುಂಟಾಗುತ್ತಿತ್ತು. ಅದರಲ್ಲೂ ಬಿ.ಸಿ.ರೋಡಿನ ರಸ್ತೆ ಹೊಂಡ ಇರುವ ಜಾಗದಲ್ಲಿ ಬ್ಯಾರಿಕೇಟ್ ಹಾಕಲಾಗಿತ್ತು. ಕೆಲವು ದಿನಗಳ ಹಿಂದೆ ಒಂದೆರಡು ಬೈಕ್ ಸವಾರರು ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಹೊಂಡ ಮುಚ್ಚಲು ಹೊರಟ ಬಿಜೆಪಿ ಕಾರ್ಯಕರ್ತರು, ಹೊಂಡಗಳನ್ನು ಕಲ್ಲಿನಿಂದ ಮುಚ್ಚಿ, ಅದರ ಮೇಲೆ ಕಾಂಕ್ರೀಟ್ ಹಾಕಿದರು. ನೆಲಕ್ಕೆ ಕಲ್ಲು ಹಾಸಿ ಕಾಂಕ್ರೀಟ್ ಹಾಕಿದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿಯಾದರೂ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಿದರು. ಈ ವೇಳೆ ಪ್ರಮುಖರಾದ ಮಚ್ಚೇಂದ್ರ ಸಾಲ್ಯಾನ್, ಪ್ರದೀಪ್ ಅಜ್ಜಿಬೆಟ್ಟು, ಪ್ರಣಾಮ್ ಅಜ್ಜಿಬೆಟ್ಟು, ಲಕ್ಷಣ್ ರಾಜ್,  ಬಿ.ಸಿ.ರೋಡ್, ಶೈಲೇಶ್ ಬಿ.ಸಿ.ರೋಡ್, ಅಶ್ವಿತ್ ಅಜ್ಜಿಬೆಟ್ಟು, ಶಶಿಧರ್ ಕೈಕುಂಜೆ, ಗಣೇಶ್ ದಾಸ್ ಪಲ್ಲಮಜಲ್, ಪ್ರದೀಪ್ ಪುಟ್ಟ,ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ