ರಾಜ್ಯದಲ್ಲಿ ಒಟ್ಟು 11,098 ಗುಣಮುಖ, 15,297 ಮಂದಿಗೆ ಚಿಕಿತ್ಸೆ

  • ಕೊರೊನಾ ಸೋಂಕಿಗೆ ಇಂದು 15 ಸಾವು, 1498 ಹೊಸ ಕೇಸ್

ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಂದು 1498 ಇದ್ದು, ಒಟ್ಟು ಸೋಂಕಿತರ ಸಂಖ್ಯೆ 26,815 ಆಗಿದೆ. ಇವರಲ್ಲಿ ಇಂದು 15 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 416ಕ್ಕೇರಿದೆ. ಇಂದು 571 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 11,098 ಮಂದಿ ಒಟ್ಟು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟಾರೆಯಾಗಿ ಇಡೀ ರಾಜ್ಯದಲ್ಲಿ ಕೋವಿಡ್ 19ಕ್ಕೆ ಚಿಕಿತ್ಸೆ ಪಡೆಯುತ್ತಿರುವವರು 15,297. ಅವರಲ್ಲಿ 279 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು

ಬೆಂಗಳೂರು ನಗರದಲ್ಲಿ ಇಂದು 800 ಮಂದಿಗೆ ಸೋಂಕು ತಗಲಿದ್ದರೆ, ಒಟ್ಟು ಸಂಖ್ಯೆ 11,361 ಆಗಿದೆ. ಇವರಲ್ಲಿ 1810 ಬಿಡುಗಡೆ ಹೊಂದಿದ್ದು, 155 ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 9395 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ದಕ್ಷಿಣ ಕನ್ನಡದಲ್ಲಿ 677, ಧಾರವಾಡದಲ್ಲಿ 402 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟಿದೆ? ಮುಂದೆ ಓದಿರಿ.

ಜಾಹೀರಾತು

DAKSHINA KANNADA: ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ 20,89,649. ಅವರಲ್ಲಿ 21,881 ಮಂದಿ ಕೊರೊನಾ ಪರೀಕ್ಷೆ ಮಾಡಿದ್ದಾರೆ. ಅವರಲ್ಲಿ 21,395 ಮಂದಿಯ ಪರೀಕ್ಷಾ ಫಲಿತಾಂಶ ಬಂದಿದೆ. 1359 ಪಾಸಿಟಿವ್ ಆಗಿದೆ. ಇಂದು 83 ಮಂದಿ ಪಾಸಿಟಿವ್ ಆಗಿದೆ. ಈ ಪ್ರಕಾರವಾಗಿ ಜನಸಂಖ್ಯೆ ಆಧಾರದಲ್ಲಿ 0.065 ಶೇಕಡಾ ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಇಂದು 99 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 683 ಮಂದಿ ಡಿಸ್ಚಾರ್ಜ್ ಆಗಿದ್ದರೆ, 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ಮರಣ ಹೊಂದಿದ್ದಾರೆ.

ಇಂದು ಮೂಡುಬಿದಿರೆ ನಿವಾಸಿ ಸುಮಾರು 65 ವರ್ಷದ ಪುರುಷ ಮಧುಮೇಹ, ಹೃದಯಸಂಬಂಧಿ ಕಾಯಿಲೆ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು, ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರು ಇಂದು ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯದಲ್ಲಿ ಒಟ್ಟು 11,098 ಗುಣಮುಖ, 15,297 ಮಂದಿಗೆ ಚಿಕಿತ್ಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*