ಜಿಲ್ಲಾ ಸುದ್ದಿ

ಸರ್ಕಾರದ ವಿಮಾ ಪಾಲಿಸಿ: ಕಂದಾಯ, ಪಂಚಾಯತ್ ರಾಜ್ ಇಲಾಖೆಯನ್ನೂ ಸೇರಿಸಿ

ಜಾಹೀರಾತು

ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸುತ್ತಿರುವ ವಿಮಾ ಪಾಲಿಸಿಗೆ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯವರನ್ನೂ ಸೇರಿಸಿಕೊಳ್ಳಿ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜನಾರ್ದನ ಹೇಳಿದ್ದಾರೆ.

ಈಗಾಗಲೇ ಸರ್ಕಾರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಉಚಿತ ವಿಮಾ ಸೌಲಭ್ಯವನ್ನು ಅಂಗನವಾಡಿ, ಆಶಾ, ಪೊಲೀಸ್ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸುತ್ತಿದ್ದು, ಇದು ೩೦ ಲಕ್ಷ ರೂಗಳ ಪಾಲಿಸಿಯನ್ನು ಹೊಂದಿರುತ್ತದೆ. ಕೊರೊನಾ ಹರಡಲು ಆರಂಭವಾದ ದಿನದಿಂದ ಇಂದಿನವರೆಗೂ ಗ್ರಾಮೀಣ ಕಾರ್ಯಪಡೆಯಲ್ಲಿ ಗ್ರಾಮಕರಣಿಕರು, ಪಿಡಿಒಗಳು, ಬಿಲ್ ಕಲೆಕ್ಟರ್ ಗಳು ಹಗಲಿರುಳು ಕೆಲಸ ಮಾಡಿದ್ದಾರೆ. ಕಂದಾಯ ಇಲಾಖೆಯಲ್ಲಿ ಜಿಲ್ಲಾಧಿಕಾರಿಯಿಂದ ಗ್ರಾಮ ಸಹಾಯಕರವರೆಗೆ, ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಪಂ ಸಿಇಒರಿಂದ ಡಿ ಗ್ರೂಪ್ ನೌಕರರವರೆಗೆ ಎಲ್ಲರೂ ಪ್ರಾಮಾಣಿಕವಾಗಿ ಸಮಯದ ಮಿತಿಯನ್ನು ನೋಡದೆ ಕೊರೊನಾ ವಾರಿಯರ್ಸ್ ಗಳಾಗಿ ದುಡಿಯುತ್ತಿದ್ದು ಪ್ರತಿಯೊಂದು ಕೆಲಸಗಳಲ್ಲೂ ಇತರ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿ ವೃದ್ಧರು, ಮಕ್ಕಳಿರುವ ಸಂದರ್ಭವೂ ಇತರ ಇಲಾಖೆಗಳಷ್ಟೇ ತುರ್ತು ಕೆಲಸ ಕಾರ್ಯಗಳನ್ನು ಹಗಲಿರುಳು ನಿರ್ವಹಿಸುವ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರಿಗೂ ಸರ್ಕಾರದ ಉಚಿತ ವಿಮಾ ಪಾಲಿಸಿ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದ್ದಾರೆ. ಕಂದಾಯ ಇಲಾಖೆ ಕಚೇರಿಗಳಾದ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಾಲೂಕು ಮತ್ತು ನಾಡಕಚೇರಿಗಳಲ್ಲಿ ಹೆಚ್ಚಿನ ಸಿಬ್ಬಂದಿ ಮಹಿಳಾ ನೌಕರಿದ್ದಾರೆ ಎಂದವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ